News Karnataka Kannada
Saturday, May 04 2024
ಬೀದರ್

ಬೀದರ್ : ಜನ ವಿರೋಧಿ ಶಕ್ತಿಗಳಿಗೆ ಸೋಲು – ಸಿಎಂ ಬಸವರಾಜ ಬೊಮ್ಮಾಯಿ

Bidar: Opponents of people's power will be crushed, says CM Basavaraj Bommai
Photo Credit : News Kannada

ಬೀದರ್:  ‘ಜನ ಶಕ್ತಿ ಮತ್ತು ದರ್ಪದ ಶಕ್ತಿ ಮಾಧ್ಯೆ ಸ್ಪರ್ಧೆ ನಡೆಯುತ್ತಿದ್ದು, ಜನ ಶಕ್ತಿ ವಿರೋಧಿಗಳು ಸೋಲು ಅನುಭವಿಸುತ್ತಾರೆ   ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಭಾಲ್ಕಿಯಲ್ಲಿಂದು ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ನಾಮಪತ್ರ ಸಲ್ಲಿಸಿದ ನಂತರ, ಸಿಎಂ ಬಸವರಾಜ ಬೊಮ್ಮಾಯಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಈ ಬಾರಿ ಬೀದರ್‌ನಲ್ಲಿ 6 ಶಾಸಕರು ಆಯ್ಕೆಯಾಗುತ್ತಾರೆ.  ಭಾಲ್ಕಿಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಯಾರು ಜನರ ವಿರುದ್ದ ಆಡಳಿತ ನಡೆಸುತ್ತಿದ್ದಾರೊ ಅವರು ಅವನತಿ ಹೊಂದುವ ಕಾಲ ಬಂದಿದೆ. ರಾಜ್ಯದಲ್ಲಿ ಕಮಲವನ್ನು ಅರಳಿಸಲು ಬಸವಣ್ಣನ ನಾಡು, ಭಾಲ್ಕಿ ಪಟ್ಟಣ, ದೇವರ ನಾಡಿಗೆ ಬಂದಿದ್ದೇವೆ. ಪ್ರಕಾಶ ಖಂಡ್ರೆ ಅವರು ಯಾರಿಗೂ ಅನ್ಯಾಯ  ಬಯಸಿದವರಲ್ಲ ಅವರಿಗೆ ಒಳಿತಾಗಲಿದೆ ಎಂದರು.  ಈ ಬಾರಿ ಸಜ್ಜನರ ಗೆಲುವಾಗಲಿದೆ ಎಂದರು. ಈ ಭಾಗದಲ್ಲಿ ರಸ್ತೆ, ನೀರಾವರಿಗೆ ಮೂಲ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೇವೆ ಎಂದರು.

ಕಾಂಗ್ರೆಸ್‌ನವರು ಚುನಾವಣೆಗೂ ಮುನ್ನ ಭರವಸೆಗಳನ್ನು ನೀಡುತ್ತ ಗ್ಯಾರಂಟಿ ಕಾರ್ಡ್ ಕೊಡುತ್ತಿದ್ದಾರೆ. ವಿಜಿಟಿಂಗ್ ಕಾರ್ಡ್ ಕೊಡುತ್ತಿದ್ದಾರೆ. ಅದಕ್ಕೆ ಯಾವುದೇ ಬೆಲೆ ಇಲ್ಲ. ಇವರು ಕೊಡುತ್ತಿರುವುದು ಬೋಗಸ್ ಕಾರ್ಡ್, 200 ಯುನಿಟ್ ವಿದ್ಯುತ್ ಉಚಿವಾಗಿ ನೀಡುವುದಾಗಿ ಹೇಳುತ್ತಾರೆ. ಅದು ನಕಲಿ ಆಶ್ವಾಸನೆ ಎಂದರು.

ಜನರು ಬಳಕೆ ಮಾಡುವುದೇ 70-80 ಯುನಿಟ್. ಇವರು 200 ಯುನಿಟ್ ಕೊಡುವುದಾಗಿ ಸುಳ್ಳು ಭರವಸೆ ನೀಡುತ್ತಿದ್ದಾರೆ  ಎಂದ ಸಿಎಂ ಬೊಮ್ಮಾಯಿ ಹೇಳಿದರು.

ಒಳ ಮೀಸಲಾಯಿಯನ್ನು ಜನರು ಮೂವತ್ತು ವರ್ಷದಿಂದ  ಕೇಳುತ್ತ ಬಂದರೂ ಕಾಂಗ್ರೆಸ್ ಮಾಡಿರಲಿಲ್ಲ. ಈಗ ನಾವು ಒಳ ಮೀಸಲಾತಿ ನೀಡಿದರೆ ಅದಕ್ಕೆ ವಿರೋಧ ಮಾಡುತ್ತಿದ್ದಾರೆ. ದಲಿತರಿಗೆ ಒಳ ಮೀಸಲಾತಿಯ ಬಗ್ಗೆ ಕಾಂಗ್ರೆಸ್ ನಿಲುವು ಏನು ಎಂದು ಸ್ಪಷ್ಟಪಡಿಸಬೇಕು ಎಂದರು.

ನಮ್ಮ ನಾಯಕ ಯಡಿಯೂರಪ್ಪ ಅವರು ರೂಪಿಸಿದ ಭಾಗ್ಯಲಕ್ಷ್ಮಿ ಯೋಜನೆಯ ಲಾಭವನ್ನು ಎಲ್ಲಾ ಸಮುದಾಯಗಳೂ ಪಡೆದುಕೊಂಡಿವೆ. ದುಡಿಯುವ ವರ್ಗಕ್ಕೆ ಶಕ್ತಿ ತುಂಬಲು ಕಾಯಕ ಯೋಜನೆ ಜಾರಿಗೆ ತಂದಿದ್ದೇವೆ.

ಮೂರು ಲಕ್ಷ ಉದ್ಯೋಗ ನೀಡುವ ಸ್ತ್ರೀಸಾಮರ್ಥ್ಯ ಯೋಜನೆ ಜಾರಿಗೆ ತಂದಿದ್ದೇವೆ.‌ ಯುವಕರಿಗೆ ಯುವ ಶಕ್ತಿ ಯೋಜನೆ ಜಾರಿಗೆ ತಂದಿದ್ದೇವೆ ಎಂದು  ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಭಾಲ್ಕಿಯಲ್ಲಿ ದೊಡ್ಡ ದೊಡ್ಡ ಸಮಾಜದ ಮುಖಂಡರು ರಾಜ್ಯಾದ್ಯಂತ ತಿರುಗಾಡುತ್ತಾರೆ. ನಿಮಗೆ ಐದು ವರ್ಷ ಅಧಿಕಾರ ಇದ್ದಾಗ ಯಾಕೆ ಅನುಭವ ಮಂಟಪ ಸ್ಥಾಪನೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು