News Karnataka Kannada
Monday, April 29 2024
ಬೀದರ್

ಬೀದರ್: ಲಿಂಗಾಯತ ಮಹಾ ರ‍್ಯಾಲಿಯಲ್ಲಿ ಪಾಲ್ಗೊಳ್ಳಿ

Participate in lingayat maha rally
Photo Credit : News Kannada

ಬೀದರ್: ‘ಲಿಂಗಾಯತ ಸ್ವತಂತ್ರ ಧರ್ಮ ಹಾಗೂ ಅಲ್ಪಸಂಖ್ಯಾತ ಮಾನ್ಯತೆಗಾಗಿ ಹೈದರಾಬಾದ್‍ನಲ್ಲಿ ಜೂನ್ 4 ರಂದು ಹಮ್ಮಿಕೊಂಡಿರುವ ಲಿಂಗಾಯತ ಮಹಾ ರ‍್ಯಾಲಿಯಲ್ಲಿ ಜಿಲ್ಲೆಯ ಲಿಂಗಾಯತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ರಾಷ್ಟ್ರೀಯ ಬಸವ ದಳದ ಬೀದರ್ ದಕ್ಷಿಣ ಉಸ್ತುವಾರಿ ಮಹಾಲಿಂಗ ಸ್ವಾಮಿ ಚಟ್ನಳ್ಳಿ ಮನವಿ ಮಾಡಿದ್ದಾರೆ.

12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ನಡೆಸುತ್ತಿರುವ ಹೋರಾಟ ಲಿಂಗಾಯತರ ಅಸ್ಮಿತೆಯ ಹೋರಾಟವಾಗಿದೆ. ಹೀಗಾಗಿ ಲಿಂಗಾಯತರು ಮಹಾ ರ‍್ಯಾಲಿಯನ್ನು ಐತಿಹಾಸಿಕಗೊಳಿಸಲು ಶ್ರಮಿಸಬೇಕು ಎಂದು ಹೇಳಿದ್ದಾರೆ.

ಸ್ವತಂತ್ರ ಧರ್ಮ ಹಾಗೂ ಅಲ್ಪಸಂಖ್ಯಾತ ಮಾನ್ಯತೆ ದೊರೆತರೆ ಲಿಂಗಾಯತರಿಗೆ ಸರ್ಕಾರದ ವಿವಿಧ ಸೌಲಭ್ಯಗಳು ಸಿಗಲಿವೆ. ಲಿಂಗಾಯತರ ಏಳಿಗೆಗೆ ನೆರವಾಗಲಿದೆ. ಸ್ವತಂತ್ರ ಧರ್ಮ ಮಾನ್ಯತೆ ಕೊಡುವವರೆಗೂ ಲಿಂಗಾಯತರ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು