ಬೀದರ್ : ‘ಯಾವುದೇ ಮುನ್ಸೂಚನೆ ನೀಡದೆ ಸಾಮಾನ್ಯ ಸಭೆ ಮುಂದೂಡಲಾಗಿದೆ’ ಎಂದು ಆರೋಪಿಸಿ ಕೆಲ ಸದಸ್ಯರು ಇಲ್ಲಿನ ನಗರಸಭೆ ಕಚೇರಿಯ ಮುಖ್ಯ ಗೇಟ್ಗೆ ಬುಧವಾರ ಬೀಗ ಜಡಿದು ಕೆಲಕಾಲ ಪ್ರತಿಭಟನೆ ನಡೆಸಿದರು.
ಬುಧವಾರ ಸಾಮಾನ್ಯ ಸಭೆ ನಿಗದಿಪಡಿಸಲಾಗಿತ್ತು. ಆದರೆ, ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಇರುವುದರಿಂದ ಸಭೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ನೋಟಿಸ್ ಕೊಡದೆ ಈ ರೀತಿ ಏಕಾಏಕಿ ಮುಂದೂಡಿರುವುದು ಸರಿಯಲ್ಲ. ನಾವು ಜನರ ಸಮಸ್ಯೆಗಳ ಕುರಿತು ಚರ್ಚಿಸಲು ಸಭೆಗೆ ಬರುತ್ತೇವೆ. ಆದರೆ, ಯಾವುದೋ ನೆಪವೊಡ್ಡಿ ಸಭೆ ಮುಂದೂಡಿರುವುದು ಸರಿಯಲ್ಲ’ ಎಂದು ಸದಸ್ಯರು ಆಕ್ಷೇಪಿಸಿದರು.
ಬಿಜೆಪಿ ಸದಸ್ಯರಾದ ಶಶಿಧರ ಹೊಸಳ್ಳಿ, ರಾಜರಾಮ, ಎಐಎಂಐಎಂನ ಮುನ್ನಾ ಸೇರಿದಂತೆ ಇತರರಿದ್ದರು.