ಬೀದರ್: ರಾಜ್ಯ ಬಿಜೆಪಿ ಸರ್ಕಾರ ಶುಕ್ರವಾರ ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್ ದೂರದೃಷ್ಟಿ ಇಲ್ಲದ ಬಜೆಟ್ ಆಗಿದೆ ಎಂದು ಬೀದರ್ ಶಾಸಕ ರಹೀಂಖಾನ್ ಟೀಕಿಸಿದ್ದಾರೆ.
ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಹಾಗೂ ಜನಸಾಮಾನ್ಯರ ಬದುಕು ಹಸನಾಗಿಸುವ ಯಾವುದೇ ಮಹತ್ವದ ಯೋಜನೆಗಳು ಬಜೆಟ್ನಲ್ಲಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಡವರು, ರೈತರು, ಕೂಲಿ ಕಾರ್ಮಿಕರ ಹಿತ ರಕ್ಷಿಸಿಲ್ಲ. ಬೆಲೆ ಏರಿಕೆಗೆ ಪರಿಹಾರ ಕಂಡುಕೊಂಡಿಲ್ಲ. ಉದ್ಯೋಗ ಸೃಷ್ಟಿಗೆ ಒತ್ತು ಕೊಟ್ಟಿಲ್ಲ. ಒಟ್ಟಾರೆ ಬಜೆಟ್ ನಿರಾಶಾದಾಯಕವಾಗಿದೆ ಎಂದು ಹೇಳಿದ್ದಾರೆ.