News Karnataka Kannada
Saturday, May 04 2024
ಬೀದರ್

ಬೀದರ್: ಬಾಲ್ಕಿ – ಹುಮನಾಬಾದ್‌ನಲ್ಲಿ ರಾಹುಲ್ ಮೆಗಾ ರ‍್ಯಾಲಿ

Rahul's mega rally at Balki-Humanabad
Photo Credit : News Kannada

ಬೀದರ್:‌ ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ನಿನ್ನೆ ಕೋಲಾರದಲ್ಲಿ ಜೈ ಭಾರತ್‌ ಸಮಾವೇಶದಲ್ಲಿ ಭಾಗಿಯಾದ ರಾಹುಲ್‌ ಗಾಂಧಿ ಇಂದು ಬೀದರ್ ನ ಭಾಲ್ಕಿ ಮತ್ತು ಹುಮನಾಬಾದ್‌ನಲ್ಲಿ ಪಕ್ಷದ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಪಕ್ಷಗಳ ಪ್ರಚಾರ ಕಾರ್ಯ ಭರ್ಜರಿಯಾಗಿ  ನಡೆಯುತ್ತಿದೆ. ಈ ಮಧ್ಯೆ ಕೇಂದ್ರ ಕಾಂಗ್ರೆಸ್‌ನ ಯುವರಾಜ ಕರ್ನಾಟಕಕ್ಕೆ ಆಗಮಿಸಿದ್ದು, ಕಾಂಗ್ರೆಸ್‌ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ನಿನ್ನೆ ಕೋಲಾರಕ್ಕೆ ಆಗಮಿಸಿದ್ದ ರಾಹುಲ್‌ ಗಾಂಧಿ, ಜೈ ಭಾರತ್‌ ಸಮಾವೇಶದಲ್ಲಿ ಭಾಗಿಯಾಗಿ ಪಕ್ಷದ ಕುರಿತಾಗಿ, ಚುನಾವಣೆ ಕುರಿತಾಗಿ ಮಾತನಾಡಿದ್ದರು. ಇದೀಗ ಇಂದು ಬೀದರ್ ಜಿಲ್ಲೆಯ ಭಾಲ್ಕಿ ಮತ್ತು ಹುಮನಾಬಾದ್‌ನಲ್ಲಿ ರಾಹುಲ್‌ ಗಾಂಧಿ ಮೆಗಾ ರ‍್ಯಾಲಿ ನಡೆಯಲಿದ್ದು, ನಂತರ ರ‍್ಯಾಲಿಯನ್ನು ಉದ್ದೇಶಿಸಿ ಕಾಂಗ್ರೆಸ್‌ ನಾಯಕ ಮಾತನಾಡಲಿದ್ದಾರೆ.

ಇನ್ನೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ಹಿರಿಯ ಕಾಂಗ್ರೆಸ್ ನಾಯಕರು ರ‍್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಮಾಜಿ ಸಚಿವ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತು ಮಾಜಿ ಸಚಿವ ರಾಜಶೇಖರ್ ಬಿ ಪಾಟೀಲ್ ಅವರು ಹಾಲಿ ಶಾಸಕರು ಮತ್ತು ಕ್ರಮವಾಗಿ ಭಾಲ್ಕಿ ಮತ್ತು ಹುಮನಾಬಾದ್ ವಿಧಾನಸಭಾ ಕ್ಷೇತ್ರಗಳಿಂದ ಪಕ್ಷದ ಅಭ್ಯರ್ಥಿಗಳಾಗಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು