ಬೀದರ್ : ‘ಪಕ್ಷ ಬಯಸಿದರೆ ಬರಲಿರುವ ಲೋಕಸಭೆ ಚುನಾವಣೆಯಲ್ಲಿ ಬೀದರ್ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ’ ಎಂದು ಮಾಜಿ ಶಾಸಕ ಅಶೋಕ ಖೇಣಿ ಹೇಳಿದರು.
ಬೀದರ್ ತಾಲ್ಲೂಕಿನ ಬಗದಲ್ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಚಿಂತನ-ಮಂಥನ ಸಭೆಯಲ್ಲಿ ಅವರು ಮಾತನಾಡಿದರು.
ವಿಧಾನಸಭೆ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿರುವ ಕ್ಷೇತ್ರದ ಮತದಾರರಿಗೆ ಕೃತಜ್ಞನಾಗಿರುವೆ. ಜನರ ಸೇವೆ ಮುಂದುವರಿಸುವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಸರ್ವ ಧರ್ಮೀಯರನ್ನು ಸಮನಾಗಿ ತೆಗೆದುಕೊಂಡು ಹೋಗಲಿದೆ ಎಂದು ಹೇಳಿದರು.
ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸಂಗ್ರಾಮ, ಮುಖಂಡರಾದ ಬಾಬುರಾವ್ ತುಂಬಾ, ಪಂಡಿತರಾವ್ ಚಿದ್ರಿ, ತನ್ವೀರ್ ಅಹಮ್ಮದ್, ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ ಚನಶೆಟ್ಟಿ, ಕರೀಂಸಾಬ್ ಕಮಠಾಣ, ಶಾಮರಾವ್ ಬಂಬಳಗಿ, ಅಮೃತರಾವ್ ಪಾಟೀಲ, ಸಚಿನ್ ಮಲ್ಕಾಪುರ, ರಮೇಶ ಹೌದಖಾನಿ, ಗೋವರ್ಧನ್ ರಾಠೋಡ್, ಉದಯಕುಮಾರ ಮಲಶೆಟ್ಟಿ, ಬಶೀರೊದ್ದಿನ್ ಸೌದಾಗರ್, ಲೋಕೇಶ ಮಂಗಲಗಿ, ಶಾಮರಾವ್ ಬಂಬಳಗಿ, ಖಯಾಮ್, ಗೌತಮ, ಜಯಪ್ರಕಾಶ, ಲೋಕೇಶ ಕನಶೆಟ್ಟಿ ಮೊದಲಾದವರು ಇದ್ದರು.