Categories: ಬೀದರ್

ಬೀದರ್: ವಿಶ್ವ ಕನ್ನಡಿಗರ ಸಂಸ್ಥೆಯ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ

ಬೀದರ್: ಪೂಜ್ಯ ಡಾ. ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರದಲ್ಲಿ ದಿನಾಂಕ ೨೯.೧೧.೨೦೨೨ ಬೆಳಗ್ಗೆ ೧೦.೩೦ ರಿಂದ ಸಂಜೆ ೬.೩೦ ಗಂಟೆಯವರೆಗೆ ಶ್ರೀ ಅಮೃತಪಾಟೀಲ ಸಿರನೂರ ನೇತೃತ್ವದಲ್ಲಿ ವಿಶ್ವಕನ್ನಡಿಗರ ಸಂಸ್ಥೆ(ರಿ), ಕರ್ನಾಟಕ ರಾಜ್ಯೋತ್ಸವ ಹಾಗೂ ಕಲ್ಯಾಣ ಕರ್ನಾಟಕ ಕಾಯಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವು ಯಶಸ್ವಿಯಾಗಿ ನಡೆಯಿತು.

ಕರ್ನಾಟಕದಿಂದ ಸಾವಿರಾರು ಕಿ.ಮೀ ದೂರದಲ್ಲಿದ್ದರೂ ಕನ್ನಡ ಭಾಷೆ, ಕನ್ನಡ ನಾಡಿಗಾಗಿ ಶ್ರಮಿಸುತ್ತಿರುವ ಹಾಗೂ ಮೂಲ ಬೀದರ್ ಜಿಲ್ಲೆಯವರಾದ ಭೀಮ ನೀಲಕಂಠರಾವ ಹಂಗರಗೆಯವರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಿರುವುದು ಅಭಿನಂದನೀಯ.

ಭೀಮ ನೀಲಕಂಠರಾವ ಹಂಗರಗೆಯವರು ಕೃಷಿ ಕುಟುಂಬದಿಂದ ಬೆಳೆದು ಪ್ರಪಂಚದ ಮೊದಲ ಹತ್ತನೇ ಬ್ರಿಟೀಷ್ ಎಂಜಿನಿಯರಿಂಗ್ ಸಲಹೆಗಾರರಾಗಿ ಕಳೆದ ೧೮ ವರ್ಷಗಳಿಂದ ದುಬೈ, ಮಸ್ಕತ್, ಅಬುದಾಬಿಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ. ಇದಲ್ಲದೇ ಮುಂಬೈ, ಬೆಂಗಳೂರಿನ ವಿವಿಧ ಸಂಸ್ಥೆಗಳಲ್ಲಿ ಮೆಕ್ಯಾನಿಕಲ್ ವಿಭಾಗಕ್ಕೆ ಸಂಬಂಧಿಸಿದಂತೆ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರು ಇನ್ಸ್’ಪೆಕ್ಟರ್ ಎಂಜಿನಿಯರ್, ಮ್ಯಾನೇಜರ್ ಹಾಗೂ ಮೊದಲಾದವುಗಳಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಜೀವನವನ್ನು ಹಲವು ಆಯಾಮಗಳಲ್ಲಿ ರೂಪಿಸಿಕೊಂಡಿದ್ದು ಎಲ್ಲಾ ಕನ್ನಡಿಗರಿಗೆ ಆದರ್ಶವಾಗಿದ್ದಾರೆ.

ಇದು ಅವರ ವೃತ್ತಿ ಜೀವನದ ವಿಶೇಷವಷ್ಟೇ! ಇನ್ನು ಇವರ ಪ್ರವೃತ್ತಿ ನೋಡುವುದಾದರೆ, ಇವರು ಸಮಾಜ ಸೇವಕರಾಗಿ, ಭಾರತೀಯ ಸಾಮಾಜಿಕ ವೇದಿಕೆ ಕರ್ನಾಟಕ ವಿಭಾಗದ ಸಲಹೆಗಾರರಾಗಿ, ಬಸವ ಬಳಗ ಮಸ್ಕತ್‌ನ ಸೇವಾಕರ್ತರಾಗಿ ಹೀಗೆ ಹತ್ತು ಹಲವು ರೀತಿಯ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರಲ್ಲದೇ, ನೂರಾರು ಕನ್ನಡಿಗರಿಗೆ ಉದ್ಯೋಗ ಸೃಷ್ಟಿಸುವಲ್ಲಿಯೂ ಸಫಲರಾಗಿರುವುದು ಶ್ಲಾಘನೀಯವಾಗಿದೆ.

ಶ್ರಮಿಸುವವರಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗದೇ ಇರದು ಎಂಬ ಮಾತಿಗೆ ಉತ್ತಮ ಉದಾಹರಣೆ  ಭೀಮ ನೀಲಕಂಠರಾವ ಹಂಗರಗೆ ಎಂದರೆ ತಪ್ಪಾಗಲಾರದು. ಇಂತಹ ಅಪರೂಪದ ಪ್ರತಿಭೆಗೆ ವಿಶ್ವ ಕನ್ನಡ ಸಂಸ್ಥೆಯ ವತಿಯಿಂದ ಗೌರವ ಸಮರ್ಪಣೆ ಭೀಮನೀಲಕಂಠರಾವ ಹಂಗರೆಯವರಿಗೆ ದೊರೆತಿರುವುದು ಹೊಳಸಮುದ್ರ ಗ್ರಾಮದ ಜನತೆಗೆಯ ಮೊಗದಲ್ಲಿ ಸಂತಸ ಉಂಟು ಮಾಡಿದೆ.

Ashika S

Recent Posts

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

7 mins ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

18 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

33 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

54 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

1 hour ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

2 hours ago