ಔರಾದ್: ಬೇಸಿಗೆ ಆರಂಭದ ಹೊತ್ತಿನಲ್ಲೇ ತಾಲ್ಲೂಕಿನ ವಿವಿಧೆಡೆ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ. ತಾಲ್ಲೂಕಿನ ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ಜಮಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಂಡಾಗಳಲ್ಲಿ ಕುಡಿಯುವ ನೀರಿಗಾಗಿ ಆಹಾಕಾರ ಶುರುವಾಗಿದೆ.
ಜಮಗಿಯಿಂದ ಎರಡೂವರೆ ಕಿ.ಮೀ. ದೂರದಲ್ಲಿರುವ ಘಾಮಾ ತಾಂಡಾದ ಜನ ಒಂದು ತಿಂಗಳ ಹಿಂದಿನಿಂದಲೇ ಕುಡಿಯಲು ನೀರಿನ ಕೊರತೆ ಎದುರಿಸುತ್ತಿದ್ದಾರೆ. ಈ ತಾಂಡಾದಲ್ಲಿ 150 ಮನೆಗಳಿದ್ದು, 600ಕ್ಕೂ ಹೆಚ್ಚು ಜನವಸತಿ ಇದೆ. ಇರುವ ಒಂದು ಕೊಳವೆ ಬಾವಿ ಬತ್ತಿ ಹೋಗಿರುವುದರಿಂದ ಜನ ಎರಡೂವರೆ ಕಿ.ಮೀ. ದೂರದಿಂದ ನೀರು ತರುವುದು ಅನಿವಾರ್ಯವಾಗಿದೆ.
‘ನಮ್ಮ ತಾಂಡಾದಲ್ಲಿ ಪ್ರತಿ ವರ್ಷ ಬೇಸಿಗೆಯಲ್ಲಿ ಇದೇ ರೀತಿಯ ನೀರಿನ ಸಮಸ್ಯೆ ಬರುತ್ತದೆ. ಆದರೆ ಇಲ್ಲಿಯ ತನಕ ಯಾರು ಸಮಸ್ಯೆಗೆ ಶಾಶ್ವತ ಪರಿಹಾರ ಮಾಡಿಲ್ಲ. ನಾವು ಕೂಲಿಗೆ ಹೋಗಬೇಕಾಗಿರುವುದರಿಂದ ನಮ್ಮ ಮಕ್ಕಳು ಶಾಲೆ ಬಿಟ್ಟು ನೀರು ತರುವುದನ್ನೇ ಮಾಡುತ್ತಿದ್ದಾರೆ’ ಎಂದು ತಾಂಡಾ ನಿವಾಸಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
‘ಜಮಗಿ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಘಾಮಾ ತಾಂಡಾ, ದೇವಲಾ ತಾಂಡಾ., ಪೋಮಾ ತಾಂಡಾ, ತುಕಾರಾಮ ತಾಂಡಾದಲ್ಲಿ ಕುಡಿಯಲು ನೀರಿನ ಕೊರತೆಯಾಗಿದೆ. ಕೆಲ ಕಡೆ ರೀಬೋರ್ ಮಾಡಿ ಸಮಸ್ಯೆ ಬಗೆಹರಿಸಲಾಗಿದೆ. ಘಾಮಾ ತಾಂಡಾದಲ್ಲಿ ರೀಬೋರ್ ಮಾಡಿದರೂ ನೀರು ಬಂದಿಲ್ಲ. ಹೀಗಾಗಿ ಆ ತಾಂಡಾ ಜನ ಸಮಸ್ಯೆ ಎದುರಿಸುತ್ತಿದ್ದಾರೆ’ ಎಂದು ಈ ತಾಂಡಾ ಪ್ರತಿನಿಧಿಸುವ ಗ್ರಾಮ ಪಂಚಾ ಯಿತಿ ಸದಸ್ಯ ವಿಠಲರಾವ್ ಹೇಳುತ್ತಾರೆ.
‘ಈ ತಾಂಡಾಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ನಾನು ಪದೇ ಪದೇ ಕೇಳುತ್ತಿದ್ದೇನೆ. ಆದರೆ ಅಧಿಕಾರಿಗಳು ನಮ್ಮ ಮಾತು ಕೇಳುತ್ತಿಲ್ಲ. ವಲ್ಲೇಪುರ ಬಳಿ ಮಾಂಜ್ರಾ ನದಿ ಸಮೀಪ ಬಾವಿ ಕೊರೆದು ಅಲ್ಲಿಂದ ನೀರು ತರುವಂತೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರೂ ಪ್ರಯೋಜನವಾಗಿಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
‘ಈಗ ಬೇಸಿಗೆ ಇದೆ. ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ಪ್ರಾಮಾಣಿಕ ಕಾಳಜಿ ಆಗುತ್ತಿಲ್ಲ. ಪಿಡಿಒ ಅವರು ಯಾವಾಗ ಬಂದು ಹೋಗುತ್ತಾರೆ ಎಂಬುದು ಜನರಿಗೆ ಗೊತ್ತೇ ಆಗುವುದಿಲ್ಲ. ಹೀಗಿರುವಾಗ ಸಮಸ್ಯೆ ಯಾರ ಮುಂದೆ ಹೇಳಿಕೊಳ್ಳಬೇಕು’ ಎಂದು ಜಮಗಿ ಗ್ರಾಮದ ನಿವಾಸಿ ಸಲ್ಲಾವುದ್ದಿನ್ ತಿಳಿಸಿದ್ದಾರೆ.
‘ಗಡಿ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಪರಿಹರಿಸಲು ಆದ್ಯತೆ ನೀಡಲಾಗಿದೆ. ಘಾಮಾ ತಾಂಡಾದಲ್ಲಿ ಸಮಸ್ಯೆ ಇರುವುದು ನಮ್ಮ ಗಮನಕ್ಕೆ ಬಂದಿದೆ. ಅಲ್ಲಿಯ ಪಿಡಿಒ ಅವರು ಸಮಸ್ಯೆಗೆ ಸ್ಪಂದಿಸುತ್ತಿದ್ದಾರೆ’ ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಸುದೇಶಕುಮಾರ ತಿಳಿಸಿದ್ದಾರೆ.
ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.
ಫ್ಲಾಟ್ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್ಐಆರ್…
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…