News Karnataka Kannada
Sunday, May 05 2024
ಬೀದರ್

ಬೀದರ್: ಖಟಕಚಿಂಚೋಳಿಯಲ್ಲಿ ರಸ್ತೆಯೇ ಚರಂಡಿ!

Latest News
Photo Credit : News Kannada

ಬೀದರ್: ಇಲ್ಲಿಯ ವಾರ್ಡ್‌ಗಳಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಹೊಲಸು ನೀರು ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದ ನಿವಾಸಿಗಳಿಗೆ ಸಾಂಕ್ರಾಮಿಕ ರೋಗ ಭೀತಿ ಎದುರಾಗಿದೆ.

ಚರಂಡಿಯಲ್ಲಿ ಪ್ಲಾಸ್ಟಿಕ್, ಕಸ-ಕಡ್ಡಿ ತುಂಬಿರುವುದರಿಂದ ನೀರು ಸರಾಗವಾಗಿ ಹರಿದು ಹೋಗುತ್ತಿಲ್ಲ.
ಸ್ವಲ್ಪ ಮಳೆ ಬಿದ್ದರೆ ಸಾಕು ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತದೆ. ಇದರಿಂದ ಪಾದಚಾರಿಗಳು ಹಾಗೂ ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿದೆ.

ರಸ್ತೆ ಬದಿಯಲ್ಲಿ ಹೊಲಸು ಸಂಗ್ರಹವಾಗಿರುವುದರಿಂದ ಅದು ಸೊಳ್ಳೆ, ಕ್ರಿಮಿ ಕೀಟಗಳ ಉತ್ಪತ್ತಿಯ ಕೇಂದ್ರವಾಗಿ ಮಾರ್ಪಟ್ಟಿದೆ. ಅಲ್ಲದೇ ಸೊಳ್ಳೆ ಕಡಿತದಿಂದ ಆಸ್ಪತ್ರೆಗೆ ಸೇರುವಂತಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಾರೆ.

ಗ್ರಾಮದ ಪ್ರತಿಯೊಂದು ವಾರ್ಡ್‌ಗಳಲ್ಲಿ ವೈಜ್ಞಾನಿಕವಾದ ಚರಂಡಿ ನಿರ್ಮಿಸಿ ಗ್ರಾಮದಿಂದ ಕೊಳಚೆ ನೀರು ಹೊರ ಹೋಗಲು ವ್ಯವಸ್ಥೆ ಮಾಡಬೇಕು ಎಂಬ ನಿವಾಸಿಗಳ ಮನವಿಗೆ ಯಾರೂ ಸ್ಪಂದಿಸಿಲ್ಲ. ಪಂಚಾಯಿತಿ ಅಧಿಕಾರಿಗಳು ಇದಕ್ಕೂ ನಮಗೂ ಸಂಬಂಧವಿಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ನಿವಾಸಿ ಸಂಗಮೇಶ ಅಸಮಾಧಾನ ವ್ಯಕ್ತಪಡಿಸುತ್ತಾರೆ.

‘ರಸ್ತೆ ಬದಿಯಲ್ಲಿ ಸಂಗ್ರಹವಾದ ತ್ಯಾಜ್ಯವನ್ನು ಪಂಚಾಯಿತಿಯವರು ನಿಯಮಿತವಾಗಿ ವಿಲೇವಾರಿ ಮಾಡುತ್ತಿಲ್ಲ. ಇದರಿಂದ ಎಲ್ಲ ಕಸ, ಕಡ್ಡಿ ಚರಂಡಿ ಸೇರುತ್ತಿದೆ. ಸಾರ್ವಜನಿಕರು ಇಂಥ ದುರ್ನಾತದ ನಡುವೆ ಜೀವನ ಸಾಗಿಸುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮದ ಸ್ವಚ್ಛತೆ ಕಡೆಗೆ ಗಮನಹರಿಸಬೇಕಿದೆ’ ಎಂದು ಸಾಮಾಜಿಕ ಕಾರ್ಯಕರ್ತ ಉಮೇಶ ಹೇಳುತ್ತಾರೆ.

ಗ್ರಾಮದಲ್ಲಿ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಆದರೆ ಒಂದು ಕೆಟ್ಟು ನಿಂತು ಸುಮಾರು ಆರು ತಿಂಗಳು ಕಳೆದಿವೆ. ಆ ಕಡೆ ಯಾರೂ ಗಮನ ಹರಿಸುತ್ತಿಲ್ಲ. ಇದರಿಂದ ಕೆಲವರಿಗೆ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸುತ್ತಾರೆ.

ಗ್ರಾಮದ ಮನೆಗಳಿಂದ ಬರುವ ತ್ಯಾಜ್ಯ, ಕೊಳಚೆ ನೀರು ಸರಾಗವಾಗಿ ಹರಿದು ಹೊರ ಹೋಗಲು ಚರಂಡಿ ನಿರ್ಮಿಸಿ, ಸೂಕ್ತವಾದ ರಸ್ತೆ ನಿರ್ಮಿಸು ವುದು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎನ್ನುವುದು ಗ್ರಾಮಸ್ಥರ ಆಗ್ರಹವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು