ಬೀದರ್

ಬೀದರ್: ಇದು ರೈತರ, ಬಡವರ, ಶ್ರಮಿಕರ ಪರವಾದ ಬಜೆಟ್ ಅಲ್ಲ ಎಂದ ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್: ಇದು ರೈತಪರ, ಬಡವರಪರ, ಶ್ರಮಿಕರಪರ ಬಜೆಟ್ ಅಲ್ಲವೆಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಕೇಂದ್ರ ಸರ್ಕಾರದ ಬಜೆಟ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಕುರಿತು ಬೀದರ್ ನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಡಬಲ್ ಇಂಜಿನ್ ಸರ್ಕಾರದ ಈ ಬಜೆಟ್ ಅನ್ನು ರಾಷ್ಟ್ರದ ಜನತೆ ಬಹಳಷ್ಟು ನಿರೀಕ್ಷೆಯಿಂದ ನೋಡುತ್ತಿದ್ದರು. ಅದರಂತೆಯೇ ಕರ್ನಾಟಕದ ಜನರು ಕೂಡ ಕೇಂದ್ರ ಬಜೆಟ್ ಮೇಲೆ ಬಹಳಷ್ಟು ನಂಬಿಕೆ ಇಟ್ಟುಕೊಂಡಿದ್ದರು. ರಾಜ್ಯಕ್ಕೆ ಲಾಭದಾಯಕ ಬಜೆಟ್ ಆಗಬಹುದು ಎಂಬುದು ನಮ್ಮೆಲ್ಲರ ನಿರೀಕ್ಷೆ ಇತ್ತು. ಆದರೆ ಅದು ಆಗಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಈ ಬಜೆಟ್ ನಲ್ಲಿ ಮಹತ್ವದ ರೈಲ್ವೆ ಯೋಜನೆಗಳಿಲ್ಲ. ರೈತರು ಎಲ್ಲಾ ರೀತಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಯಿಂದ, ನೆಟೆ ರೋಗದಿಂದ ಬೆಳೆಗಳು ಹಾನಿಯಾಗಿವೆ. ರೈತರಿಗೆ ಸರಿಯಾದ ರೀತಿಯಲ್ಲಿ ವಿಮೆ, ಬೆಂಬಲ ಬೆಲೆಗಳು ಸಿಗುತ್ತಿಲ್ಲ. ರೈತರ ಆದಾಯ ದ್ವಿಗುಣ ಮಾಡುವ ನಿಟ್ಟಿನಲ್ಲಿ, ರೈತರಿಗೆ ದೊಡ್ಡಮಟ್ಟದ ಯೋಜನೆಗಳನ್ನು ನೀಡಿಲ್ಲ. ಪ್ರಸ್ತುತ ನೀಡುತ್ತಿರುವ ಎರಡು ಸಾವಿರ ರೂ. ಗಳನ್ನು ಹತ್ತು ಸಾವಿರಕ್ಕೆ ಹೆಚ್ಚಿಸಬಹುದಿತ್ತು. ಆ ಕೆಲಸವನ್ನು ಮಾಡಿಲ್ಲ. ಒಟ್ಟಾರೆಯಾಗಿ ಈ ಬಜೆಟ್ ರೈತರ ಪರವಾಗಿ, ಬಡವರ, ಶ್ರಮಿಕರ ಪರವಾಗಿಲ್ಲ. ಡಬಲ್ ಇಂಜಿನ್ ಸರ್ಕಾರದ ಮೇಲೆ ನಾವು ಇಟ್ಟುಕೊಂಡ ನಿರೀಕ್ಷೆ ಹುಸಿಯಾಗಿದೆ. ಈ ಬಜೆಟ್ ನಿಂದ ಕರ್ನಾಟಕಕ್ಕೆ ಯಾವುದೇ ರೀತಿಯಲ್ಲಿ ದೊಡ್ಡಮಟ್ಟದ ಖುಷಿ ತಂದಿಲ್ಲ. ಇದು ನಿರಾಶಾದಾಯಕವಾದ ಬಜೆಟ್ ಆಗಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಅಸಮಾಧಾನ ವ್ಯಕ್ತಪಡಿಸಿದರು.

Ashika S

Recent Posts

ಬ್ಯಾಂಕ್ ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬೇಡಿ: ಡಿಸಿ

ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…

4 hours ago

ಕೇರಳದ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ  ಬಹುತೇಕ ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

4 hours ago

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ: ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.

4 hours ago

ಬಿರುಗಾಳಿಯೊಂದಿಗೆ ಸುರಿದ ಮಳೆ: ಮಾವು, ಪಪ್ಪಾಯಿ ಬೆಳೆಗೆ ಹಾನಿ

ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.

5 hours ago

ಚಾಮರಾಜನಗರ: ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ   ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

5 hours ago

ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್‌ ಪಡೆದು ಬಸ್‌ನಲ್ಲಿ ಸಂಚರಿಸಿದ ನ್ಯಾಯಾಧೀಶ

ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.

5 hours ago