News Karnataka Kannada
Tuesday, May 07 2024
ಬೀದರ್

ಬೀದರ್: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ ನ್ಯಾಯ ಬೆಲೆ ಅಂಗಡಿಯಲ್ಲಿ 5ಕೆ.ಜಿ ಅಕ್ಕಿ ವಿತರಣೆ

Rice
Photo Credit : News Kannada

ಬೀದರ್: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯ ಅಕ್ಕಿಯನ್ನು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಅನುದಾನದಡಿ ಖರೀದಿಸಿ ವಿತರಿಸಲಾಗುತ್ತಿದೆ.

ಜನವರಿ-2023 ಮಾಹೆಯಲ್ಲಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಂತ್ಯೋದಯ (AAY) ಪಡಿತರ ಚೀಟಿದಾರರಿಗೆ 35 ಕೆಜಿ ಹಾಗೂ ಆದ್ಯತಾ(PHH) ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ 5 ಕೆ.ಜಿ.ಯಂತೆ ಉಚಿತವಾಗಿ ವಿತರಿಸಲಾಗುವುದು.

ಜನವರಿ-2023ರ ಮಾಹೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವಾರಿವಾಗಿ 01 ಕೆ.ಜಿ ಅಕ್ಕಿಯನ್ನು ನೀಡಲು ನಿರ್ಧರಿಸಲಾಗಿರುತ್ತದೆ. ಆನವರಿ-2023ರ ನೀಡಬೇಕ್ಕಾದ 01ಕೆ.ಜಿ ಅಕ್ಕಿಯನ್ನು ಫೆಬ್ರುವರಿ-2023ರ ಮಾಹೆಯಲ್ಲಿ ಸೇರಿಸಿ ಅಕ್ಕಿಯನ್ನು ಪಡಿತರ ವಿತರಣೆ ಮಾಡಲಾಗುವುದು.

ಆದ್ಯತೇತರ (ಎಪಿಎಲ್) ಪಡಿತರ ಚೀಟಿಯ ಏಕ ಸದಸ್ಯ ಪಡಿತರ ಚೀಟಿಗೆ 5 ಕೆ.ಜಿ. ಅಕ್ಕಿ ಹಾಗೂ ಎರಡು ಮತ್ತು ಹೆಚ್ಚಿನ ಸದಸ್ಯರಿರುವ ಪಡಿತರ ಚೀಟಿಗೆ 10ಕೆ.ಜಿ. ಅಕ್ಕಿ, ಪ್ರತಿ ಕೆ.ಜಿ.ಗೆ 15ರೂ. ದಂತೆ ವಿತರಣೆ ಮಾಡಲಾಗುವುದು.

ಅಂತರಾಜ್ಯ ಪೋರ್ಟೆಬಲಿಟಿ ಮೂಲಕ ಪಡಿತರ ಪಡೆಯುವ ಕೇಂದ್ರ ಸರ್ಕಾರದ ಪಡಿತರ ವಿತರಣಾ ಪ್ರಮಾಣ 5 ಕೆ.ಜಿ.ಅಕ್ಕಿ ಪ್ರತಿ ಸದಸ್ಯರಿಗೆ ರಾಜ್ಯ ಯಾವುದೇ ನ್ಯಾಯ ಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು