Categories: ಬೀದರ್

ಬೀದರ್: ಕೇಂದ್ರ ಬಜೆಟ್ ರೈತರ ಅಭಿವೃದ್ಧಿಗೆ ಪೂರಕ – ಪ್ರಭು ಚವ್ಹಾಣ್

ಬೀದರ್: ರೈತರ ಆದಾಯ ಹೆಚ್ಚಿಸಲು ಸರ್ಕಾರ ಹಲವು ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಿದ್ದು, ಪಶುಸಂಗೋಪನೆ, ಮೀನುಗಾರಿಕೆ, ಹೈನುಗಾರಿಕೆ ಕ್ಷೇತ್ರವನ್ನು ಉತ್ತೇಜಿಸಲು ಅನುದಾನ ಮೀಸಲಿಡಲಾಗಿದೆ. ಇದು ರೈತರ ಅಭ್ಯುದಯಕ್ಕೆ ಪೂರಕವಾಗಲಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಬಣ್ಣಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಗ್ರಾಮೀಣ ಆರ್ಥಿಕತೆಯ ಬಗ್ಗೆ ಈ ಬಾರಿಯ ಬಜೆಟ್ ವಿಶೇಷ ಗಮನ ನೀಡಿದೆ.

ಪಶುಸಂಗೋಪನೆ, ಡೇರಿ ಮತ್ತು ಮೀನುಗಾರಿಕೆಯನ್ನೂ ಒಳಗೊಂಡಂತೆ ಕೃಷಿ ಸಾಲಕ್ಕಾಗಿ ₹ 20 ಲಕ್ಷ ಕೋಟಿ ಅನುದಾನ ಮೀಸಲಿಟ್ಟಿರುವುದು ರೈತರ ಆರ್ಥಿಕತೆಯ ವೃದ್ಧಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶದಿಂದ ಜಾನುವಾರು ಗೊಬ್ಬರವನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡುವುದನ್ನು ಉತ್ತೇಜಿಸಲು ಗೋಬರ್ ಧನ್ ಯೋಜನೆ ಘೋಷಿಸಲಾಗಿದೆ. ಜಾನುವಾರು ಗೊಬ್ಬರವಷ್ಟೇ ಅಲ್ಲದೇ ಕೃಷಿ ಭೂಮಿಯಲ್ಲಿನ ಘನ ತ್ಯಾಜ್ಯ ನಿರ್ವಹಣೆಗೂ ಉತ್ತೇಜನ ಸಿಗಲಿದೆ. ತ್ಯಾಜ್ಯವನ್ನು ಕಾಂಪೋಸ್ಟ್, ರಸಗೊಬ್ಬರ, ಜೈವಿಕ ಅನಿಲ ಮತ್ತು ಜೈವಿಕ-ಸಿಎನ್ ಜಿ ಯನ್ನಾಗಿ ಮರುಬಳಕೆ ಮಾಡುವುದನ್ನೂ ಸಹ ಈ ಯೋಜನೆ ಉತ್ತೇಜಿಸಲಿದೆ ಎಂದು ಹೇಳಿದ್ದಾರೆ.

ಸಮುದಾಯ ಹಂತದಲ್ಲಿ ಗೋಬರ್ ಧನ್ ಘಟಕವನ್ನು ನಿರ್ಮಿಸಿ ಹಸಿ ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವುದಲ್ಲದೇ ಆರ್ಥಿಕವಾಗಿಯೂ ಲಾಭ ಗಳಿಸಬಹುದು. ಅತೀ ಹೆಚ್ಚು ಹಸಿ ತ್ಯಾಜ್ಯ ಉತ್ಪತ್ತಿಯಾಗುವ ಸ್ಥಳಗಳಾದ ಗೋಶಾಲೆ, ಅನ್ನದಾಸೋಹವಿರುವ ಧಾರ್ಮಿಕ ಸ್ಥಳಗಳು, ಸ್ವಚ್ಛ ಸಂಕೀರ್ಣ ಘಟಕ, ವಸತಿ ನಿಲಯಗಳು, ಸಮುದಾಯ ಭವನ, ತರಕಾರಿ/ಹೂ/ ಹಣ್ಣಿನ ಮಾರುಕಟ್ಟೆ, ಶಾಲೆಗಳಲ್ಲಿ ಗೋಬರ್ ಧನ್ ಘಟಕವನ್ನು ಸ್ಥಾಪಿಸಬಹುದು.

2023ರ ಬಜೆಟ್ ನಲ್ಲಿ ಕರ್ನಾಟಕ ನೀರಾವರಿ ಕ್ಷೇತ್ರಕ್ಕೆ ಉತ್ತಮ ಕೊಡುಗೆ ಸಿಕ್ಕಿದೆ. ಬರಗಾಲ ಪೀಡಿತ ಪ್ರದೇಶಗಳಿಗೆ ನೀರಾವರಿ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ₹ 5,300 ಕೋಟಿ ಅನುದಾನ ಘೋಷಿಸಲಾಗಿದೆ. ಬಜೆಟ್ ನಲ್ಲಿ ರಾಸಾಯನಿಕ ಮುಕ್ತ‌ ಸಹಜ/ ಸಾವಯವ ಕೃಷಿಗೆ ಆದ್ಯತೆ ನೀಡಲಾಗಿದ್ದು, ಸಹಜ/ ಸಾವಯವ ಕೃಷಿಗೆ ಮರಳುವ 1 ಕೋಟಿ ರೈತರಿಗೆ ನೆರವು ಘೋಷಿಸಿರುವುದು ಅರೋಗ್ಯಕರ ಬೆಳವಣಿಗೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ರೈತರು, ಯುವಕರು, ಮಹಿಳೆಯರು ಮತ್ತು ಹಿಂದುಳಿದವರ ಅಭಿವೃದ್ಧಿಗೆ ಬದ್ಧತೆ ತೋರುವ ಬಜೆಟ್ ಇದಾಗಿದೆ. ಎಲ್ಲ ಕ್ಷೇತ್ರಗಳಿಗೂ ಆದ್ಯತೆ ನೀಡುವ ಮೂಲಕ 2047ರ ಹೊತ್ತಿಗೆ ಭಾರತವನ್ನು ಸಮೃದ್ಧ ದೇಶವಾಗಿಸಲು ಹೊರಟಿರುವ ವಿಶ್ವನಾಯಕ ನರೇಂದ್ರಮೋದಿಯವರು ಮತ್ತು ರೈತಸ್ನೇಹಿ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರಿಗೆ ಸಚಿವ ಪ್ರಭು ಚವ್ಹಾಣ್ ಅಭಿನಂದನೆ ಸಲ್ಲಿಸಿದ್ದಾರೆ.

Ashika S

Recent Posts

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

14 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

35 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

59 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

1 hour ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

2 hours ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

2 hours ago