ಔರಾದ : ಬೀದರ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಮಗ್ರ ತನಿಖೆ ನಡೆಸಲು ಕೋರಿ ಸಮಾಜ ಸೇವಕ ಗುರು ನಾಥ ವಡೆಯವರು ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವರು ಅಮಿತ್ ಶಾಹ ಹಾಗೂ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವರಾದ ನಿತಿನ ಗಡ್ಕರಿ ಇವರಿಗೆ ಬೀದರ ಜಿಲ್ಲಾಧಿಕಾರಿ ಗಳ ಮುಖಾಂತರ ಮನವಿ ಸಲ್ಲಿಸಿದರು.
ಔರಾದದಿಂದ ಬೀದರ ವರೆಗಿನ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ: 161 (ಎ) ಭಾರತ ಮಾಲಾ ಯೋಜನೆಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಸದರಿ ಕಾಮಗಾರಿಯನ್ನು ತೃಪ್ತಿಕರವಾಗಿ ನಡೆಯುತ್ತಿಲ್ಲ ಎಂದು ಈ ಭಾಗದ ಸಾರ್ವ ಜನಿಕರು, ಸಂಘ-ಸಂಸ್ಥೆಗಳು, ಜನ ಪ್ರತಿನಿಧಿಗಳು, ಸರ್ಕಾರದಲ್ಲಿನ ಸಚಿ ವರುಗಳು ಅತೃಪ್ತಿ ವ್ಯಕ್ತಪಡಿಸಿರುತ್ತಾರೆ.
ಔರಾದದಿಂದ ಬೀದರ ವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 161ಎ ನಿರ್ಮಾಣವು ಎನ್.ಎಸ್.ಎ.ಐ.ದಿಂದ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಸದರಿ ಕಾಮಗಾರಿ ಗುಣಮಟ್ಟದಿಂದ ನಡೆಯು ತ್ತಲ್ಲ ಹಾಗೂ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಪಾಲಿಸಬೇಕಾದ ಮಾನಕಗಳ ಪಾಲನೆಯಾಗುತ್ತಿಲ್ಲ ಹಾಗೂ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ಗಳ ಆದೇಶ, ನಿರ್ದೇಶನ ಗಳ ಪಾಲನೆ ಆಗುತ್ತಿಲ್ಲ ಎಂಬುದರ ಬಗ್ಗೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಆದ್ದರಿಂದ ಔರಾದ-ಬೀದರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಉನ್ನತ ಮಟ್ಟದ ಸಮಗ್ರ ತನಿಖೆ ನಡೆಸಬೇಕೆಂದು ಸಮಾಜ ಸೇವಕ ಗುರುನಾಥ ವಡ್ಡೆಯವರು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.