News Karnataka Kannada
Friday, May 03 2024
ಬೀದರ್

 ಬೀದರ್:  ಹೆದ್ದಾರಿ ಕಾಮಗಾರಿ ತನಿಖೆಗೆ ವಡ್ಡೆ ಮನವಿ

Vadde demands probe into highway works
Photo Credit : News Kannada

ಔರಾದ : ಬೀದರ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಮಗ್ರ ತನಿಖೆ ನಡೆಸಲು ಕೋರಿ ಸಮಾಜ ಸೇವಕ ಗುರು ನಾಥ ವಡೆಯವರು ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವರು ಅಮಿತ್ ಶಾಹ ಹಾಗೂ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವರಾದ ನಿತಿನ ಗಡ್ಕರಿ ಇವರಿಗೆ ಬೀದರ ಜಿಲ್ಲಾಧಿಕಾರಿ ಗಳ ಮುಖಾಂತರ ಮನವಿ ಸಲ್ಲಿಸಿದರು.

ಔರಾದದಿಂದ ಬೀದರ ವರೆಗಿನ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ: 161 (ಎ) ಭಾರತ ಮಾಲಾ ಯೋಜನೆಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಸದರಿ ಕಾಮಗಾರಿಯನ್ನು ತೃಪ್ತಿಕರವಾಗಿ ನಡೆಯುತ್ತಿಲ್ಲ ಎಂದು ಈ ಭಾಗದ ಸಾರ್ವ ಜನಿಕರು, ಸಂಘ-ಸಂಸ್ಥೆಗಳು, ಜನ ಪ್ರತಿನಿಧಿಗಳು, ಸರ್ಕಾರದಲ್ಲಿನ ಸಚಿ ವರುಗಳು ಅತೃಪ್ತಿ ವ್ಯಕ್ತಪಡಿಸಿರುತ್ತಾರೆ.

ಔರಾದದಿಂದ ಬೀದರ ವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 161ಎ ನಿರ್ಮಾಣವು ಎನ್.ಎಸ್.ಎ.ಐ.ದಿಂದ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಸದರಿ ಕಾಮಗಾರಿ ಗುಣಮಟ್ಟದಿಂದ ನಡೆಯು ತ್ತಲ್ಲ ಹಾಗೂ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಪಾಲಿಸಬೇಕಾದ ಮಾನಕಗಳ ಪಾಲನೆಯಾಗುತ್ತಿಲ್ಲ ಹಾಗೂ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‌ಗಳ ಆದೇಶ, ನಿರ್ದೇಶನ ಗಳ ಪಾಲನೆ ಆಗುತ್ತಿಲ್ಲ ಎಂಬುದರ ಬಗ್ಗೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಆದ್ದರಿಂದ ಔರಾದ-ಬೀದರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಉನ್ನತ ಮಟ್ಟದ ಸಮಗ್ರ ತನಿಖೆ ನಡೆಸಬೇಕೆಂದು ಸಮಾಜ ಸೇವಕ ಗುರುನಾಥ ವಡ್ಡೆಯವರು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು