Categories: ಬೀದರ್

ಬೀದರ್: ಗ್ರಾಮ ಪಂಚಾಯ್ತಿ ಅಧಿಕಾರಿಗೆ ಲಂಚ ನೀಡಲು ಹಣವಿಲ್ಲದೆ, ಎತ್ತುಗಳನ್ನೇ ನೀಡಲು ಮುಂದಾದ ರೈತ

ಬೀದರ್: ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ಕಾಮಗಾರಿ ಬಿಲ್‌ ಪಾವತಿಗೆ 5 ಸಾವಿರ ರೂ. ಲಂಚ ಕೇಳಿದ್ದರಿಂದ ನೊಂದ ರೈತನೊಬ್ಬ ತನ್ನ ಜೋಡೆತ್ತುಗಳನ್ನು ತೆಗೆದುಕೊಂಡು ಬಿಲ್‌ ಮಂಜೂರು ಮಾಡುವಂತೆ ಮನವಿ ಮಾಡಿದ ಘಟನೆ ತಾ.ಪಂ.ನಲ್ಲಿ ನಡೆದಿದೆ.

ಬಗದೂರಿ ಗ್ರಾಮದ ಪ್ರಶಾಂತ ಬಿರಾದಾರ್‌ ತನ್ನ ಜೋಡೆತ್ತುಗಳ ಸಹಿತ ತಾ.ಪಂ.ಗೆ ಆಗಮಿಸಿ, “ಉದ್ಯೋಗ ಖಾತ್ರಿ ಯೋಜನೆಯಡಿ ಕಳೆದ ವರ್ಷ ನನ್ನ ಜಮೀನಿನಲ್ಲಿರುವ ಹಳ್ಳಕ್ಕೆ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಈ ಕಾಮಗಾರಿಗೆ 1 ಲಕ್ಷ ರೂ. ಅನುದಾನ ಮಂಜೂರಾಗಿತ್ತು. ಕಾಮಗಾರಿಗೆ ಸಂಬಂಧಿಸಿ ನನಗೆ 55 ಸಾವಿರ ರೂ. ಪಾವತಿಸಲಾಗಿದೆ. ಉಳಿದ 45 ಸಾವಿರ ರೂ. ಪಾವತಿಯಾಗಿಲ್ಲ. ಅದನ್ನು ನೀಡಲು ಜೆಇ ಶೇ.5 (5 ಸಾವಿರ ರೂ.) ಲಂಚ ಕೇಳಿದ್ದಾರೆ. ಆದರೆ ಲಂಚ ನೀಡಲು ಹಣ ಇಲ್ಲದ ಕಾರಣ ಎತ್ತುಗಳನ್ನು ತೆಗೆದುಕೊಂಡು ಬಿಲ್‌ ಮಂಜೂರು ಮಾಡಿ” ಎಂದು ಕೇಳಿಕೊಂಡಿದ್ದಾನೆ.

ಸುದ್ದಿ ತಿಳಿದ ತಾ.ಪಂ. ಇ.ಒ. ಸಂತೋಷ ಚೌವ್ಹಾಣ್‌ ಸ್ಥಳಕ್ಕೆ ಭೇಟಿ ನೀಡಿ ಬಿಲ್‌ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದು, ಬಳಿಕ ರೈತನು ಮನೆಗೆ ಮರಳಿದ್ದಾನೆ.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago