News Karnataka Kannada
Thursday, May 02 2024
ಬೀದರ್

ಸೇತುವೆ ದಾಟಲು ಹೋಗಿ ನೀರು ಪಾಲಾದ ಯುವಕನ ಶವ 3 ದಿನದ ಬಳಿಕ ಪತ್ತೆ: ಸಹಾಯವಾಯ್ತು ಡ್ರೋನ್

Bidar youth's body found after 3 days after crossing bridge
Photo Credit : News Kannada

ಬೀದರ್: ಸೇತುವೆ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋದ ಯುವಕನ ಮೃತದೇಹ ಮೂರು ದಿನದ ಬಳಿಕ ಶನಿವಾರ (ಜುಲೈ 29) ಧನ್ನೂರ್‌ ಗ್ರಾಮದ ಸೇತುವೆ ಬಳಿ ಪತ್ತೆಯಾಗಿದೆ.

ಮೃತ ಯುವಕನನ್ನು ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಧನ್ನೂರ್‌ ಆರ್. ಗ್ರಾಮದ ಮಲ್ಲಪ್ಪ ಶರಣಪ್ಪ ಕರೆಪನೋರ್‌ (25) ಎಂದು ಗುರುತಿಸಲಾಗಿದೆ.

ಸೇತುವೆ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋದ ಯುವಕನ ಮೃತದೇಹ ಮೂರು ದಿನಗಳಾದರೂ ಇನ್ನೂ ಪತ್ತೆಯಾಗದ ಕಾರಣ ಬೀದರ್ ಪೊಲೀಸರು ಡ್ರೋನ್ ಮೊರೆ ಹೋಗಿದ್ದರು.

ಮೂರು ದಿನಗಳ ಹಿಂದೆ ಧಾರಾಕಾರ ಮಳೆಯಿಂದ ತುಂಬಿ ಹರಿಯುತ್ತಿದ್ದ ಸೇತುವೆ ದಾಟುವಾಗ ಯುವಕ ಮಲ್ಲಪ್ಪ ಕರೆನವರ್ ನೀರಿನಲ್ಲಿ ಕೊಚ್ಚಿ ಹೋಗಿದ್ದನು. ಸ್ಥಳೀಯರ ಮೂಲಕ ಮತ್ತು ಅಗ್ನಿ ಶಾಮಕ ದಳ ಸಿಬ್ಬಂದಿ ಮೂಲಕ ಶೋಧನಾ ಕಾರ್ಯ ನಡೆಸಿದರೂ ಪತ್ತೆಯಾಗಿರಲಿಲ್ಲ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಲಂಗೋಟಿ ಸೂಚನೆಯಂತೆ ಯುವಕನ ಮೃತದೇಹವನ್ನು ಪತ್ತೆ ಮಾಡಲು ಡ್ರೋನ್ ಕ್ಯಾಮೆರಾ ಬಳಸಿ ಶೋಧ ಕಾರ್ಯ ನಡೆಸಿದ್ದರು. ಡ್ರೋನ್‌ ಕ್ಯಾಮೆರಾ ಮತ್ತು ಡಿಆರ್‌ಎಫ್‌ ತಂಡದ ಸಿಬ್ಬಂದಿಗಳು ನಿರಂತರ ಶೋಧನಾ ಕಾರ್ಯ ನಡೆಸಿದ್ದರು. ಕೊನೆಗೂ ಮೂರು ದಿನಗಳ ಬಳಿಕ ಯುವಕನ ಶವ ಪತ್ತೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು