ಬೀದರ್: ಸೇತುವೆ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋದ ಯುವಕನ ಮೃತದೇಹ ಮೂರು ದಿನದ ಬಳಿಕ ಶನಿವಾರ (ಜುಲೈ 29) ಧನ್ನೂರ್ ಗ್ರಾಮದ ಸೇತುವೆ ಬಳಿ ಪತ್ತೆಯಾಗಿದೆ.
ಮೃತ ಯುವಕನನ್ನು ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಧನ್ನೂರ್ ಆರ್. ಗ್ರಾಮದ ಮಲ್ಲಪ್ಪ ಶರಣಪ್ಪ ಕರೆಪನೋರ್ (25) ಎಂದು ಗುರುತಿಸಲಾಗಿದೆ.
ಸೇತುವೆ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋದ ಯುವಕನ ಮೃತದೇಹ ಮೂರು ದಿನಗಳಾದರೂ ಇನ್ನೂ ಪತ್ತೆಯಾಗದ ಕಾರಣ ಬೀದರ್ ಪೊಲೀಸರು ಡ್ರೋನ್ ಮೊರೆ ಹೋಗಿದ್ದರು.
ಮೂರು ದಿನಗಳ ಹಿಂದೆ ಧಾರಾಕಾರ ಮಳೆಯಿಂದ ತುಂಬಿ ಹರಿಯುತ್ತಿದ್ದ ಸೇತುವೆ ದಾಟುವಾಗ ಯುವಕ ಮಲ್ಲಪ್ಪ ಕರೆನವರ್ ನೀರಿನಲ್ಲಿ ಕೊಚ್ಚಿ ಹೋಗಿದ್ದನು. ಸ್ಥಳೀಯರ ಮೂಲಕ ಮತ್ತು ಅಗ್ನಿ ಶಾಮಕ ದಳ ಸಿಬ್ಬಂದಿ ಮೂಲಕ ಶೋಧನಾ ಕಾರ್ಯ ನಡೆಸಿದರೂ ಪತ್ತೆಯಾಗಿರಲಿಲ್ಲ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಲಂಗೋಟಿ ಸೂಚನೆಯಂತೆ ಯುವಕನ ಮೃತದೇಹವನ್ನು ಪತ್ತೆ ಮಾಡಲು ಡ್ರೋನ್ ಕ್ಯಾಮೆರಾ ಬಳಸಿ ಶೋಧ ಕಾರ್ಯ ನಡೆಸಿದ್ದರು. ಡ್ರೋನ್ ಕ್ಯಾಮೆರಾ ಮತ್ತು ಡಿಆರ್ಎಫ್ ತಂಡದ ಸಿಬ್ಬಂದಿಗಳು ನಿರಂತರ ಶೋಧನಾ ಕಾರ್ಯ ನಡೆಸಿದ್ದರು. ಕೊನೆಗೂ ಮೂರು ದಿನಗಳ ಬಳಿಕ ಯುವಕನ ಶವ ಪತ್ತೆಯಾಗಿದೆ.
ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್ಸ್ಕಿನ್ ಇರುವವರೂ…
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.