ಬೀದರ್: ನೇಹಾ ಹತ್ಯೆಯನ್ನು ಈಗಾಗಲೇ ಖಂಡಿಸಿದ್ದೇನೆ, ಈಗಲೂ ಖಂಡಿಸುತ್ತೇನೆ ಎಂದು ನಗರದಲ್ಲಿಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.
ಪ್ರಕರಣದ ತನಿಖೆಯನ್ನ ಸಿಐಡಿಗೆ ಕೊಟ್ಟಿದ್ದೇವೆ, ವಿಶೇಷ ನ್ಯಾಯಲಯ ಮಾಡಬೇಕು ಅಂತ ಹೇಳಿದ್ದೇನೆ. ಅಪರಾಧಿಗೆ ಕಠಿಣ ಶಿಕ್ಷೆಯಾಗಬೇಕು, ಘೋರ ಶಿಕ್ಷ ಕೊಡಲು ಪ್ರಯತ್ನ ಮಾಡಬೇಕೆಂದು ಮಾತಾಡಿದ್ದೇನೆ. ಅವರ ತಂದೆ ಜೊತೆಗೂ ಮಾತಾಡಿ, ಆರೋಪಿಗೆ ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿದ್ದೆವೆಂದು ಹೇಳಿದ್ದೇನೆ. ಬಿಜೆಪಿಯವರು ಒಂದಾದರೂ ಪ್ರಕರಣ ಸಿಬಿಐಗೆ ಕೊಟ್ಟಿದ್ದಾರಾ..?
ನೇಹಾ ಪ್ರಕರಣವನ್ನ ಸಿಐಡಿ ತನಿಖೆ ನಡೆಸುತ್ತಿದೆ, ಬಿಜೆಪಿಯವರಿಗೆ ಯಾವುದೇ ನೈತಿಕ ಹಕ್ಕು ಇಲ್ಲಾ ಮಾತಾಡೋದಕ್ಕೆ. ನೇಹಾ ಹತ್ಯೆ ಪ್ರಕರಣದಲ್ಲಿ ರಾಜಕೀಯ ಮಾಡಬಾರದು ಎಂದು ಬಿಜೆಪಿ ವಿರುದ್ದ ಸಿಎಂ ಕಿಡಿಕಾರಿದ್ದಾರೆ.
ನೇಹಾ ಕೊಲೆಯಿಂದ ದೊಡ್ಡ ಅನ್ಯಾಯ ಆಗಿದೆ ನಾನು ಈಗಾಗಲೇ ಖಂಡಿಸಿದ್ದೇನೆ. ನೇಹಾ ಕೊಲೆಯನ್ನ ಸರ್ಕಾರ ತೀವ್ರವಾಗಿ ಖಂಡಿಸುತ್ತೆ. ತಪ್ಪಿತಸ್ಥರಿಗೆ ಘೋರವಾದ ಶಿಕ್ಷೆ ಕೊಡಲು ಪ್ರಾಮಾಣಿಕ ಪ್ರಯತ್ನ ಸರ್ಕಾರ ಮಾಡಲಿದೆ ಎಂದು ಬೀದರ್ ನಲ್ಲಿ ಹೇಳಿಕೆ ನೀಡಿದರು.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…
ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…
ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.
ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್ ಶವವಾಗಿ ಪತ್ತೆಯಾಗಿದ್ದಾನೆ.
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…