ಬೀದರ್: ‘ಬಿಜೆಪಿ-ಜೆಡಿಎಸ್ ಮೈತ್ರಿ ಅವಕಾಶವಾದಿ ರಾಜಕಾರಣ’ ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಅವಕಾಶವಾದಿ ಆಗಿರುವುದರಿಂದ ಅದು ಕೊನೆಯ ವರೆಗೆ ಇರುವುದಿಲ್ಲ. ರಾಜ್ಯದ ಜನತೆಗೆ ಇದೆಲ್ಲ ಗೊತ್ತಿದೆ ಎಂದು ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜಗತ್ತಿನ ಅತಿದೊಡ್ಡ ಭ್ರಷ್ಟಾಚಾರ: ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂಪಾಯಿ ಪಡೆದಿರುವ ಬಿಜೆಪಿ ಜಗತ್ತಿನ ಅತಿದೊಡ್ಡ ಭ್ರಷ್ಟಾಚಾರ ಎಸಗಿದೆ. ಬಾಂಡ್ ಖರೀದಿಸಿ ಬಿಜೆಪಿಗೆ ದೇಣಿಗೆ ಕೊಟ್ಟಿದ್ದವರಿಗೆ ಸಾವಿರಾರು ಕೋಟಿ ರೂಪಾಯಿ ಕಾಮಗಾರಿಗಳನ್ನು ಕೊಟ್ಟು ಅನುಕೂಲ ಮಾಡಿಕೊಡಲಾಗಿದೆ. ಯಾವ ಆಧಾರದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ ಎಂದರು ಪ್ರಶ್ನಿಸಿದರು.
ಬಿಜೆಪಿ ಸೇರಿ ಸ್ವಚ್ಛರಾದರೆ? ಭ್ರಷ್ಟಾಚಾರದ ಆರೋಪ ಹೊಂದಿರುವ ಕಾಂಗ್ರೆಸ್, ಎಎಪಿಯ ಮುಖಂಡರು ಬಿಜೆಪಿಗೆ ಸೇರಿದ ನಂತರ ಸ್ವಚ್ಛರಾದರೆ? ಎಲ್ಲೂ ನಮಗೆ ‘ಲೆವಲ್ ಪ್ಲೇಯಿಂಗ್ ಫೀಲ್ಡ್’ ಇಲ್ಲ. ದೇಶದಲ್ಲಿ ಎಂದೂ ಈ ಪರಿಸ್ಥಿತಿ ಬಂದಿರಲಿಲ್ಲ. ಪ್ರತಿಪಕ್ಷದವರಿಗೆ ಸಂಪನ್ಮೂಲ ಇಲ್ಲದಂತೆ ನೋಡಿಕೊಳ್ಳುವ ತಂತ್ರ ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ