News Karnataka Kannada
Tuesday, April 30 2024
ಬೀದರ್

ಇಂದು ಗಡಿ ಜಿಲ್ಲೆ ಬೀದರ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರವಾಸ

New Project 2024 01 29t094433.139
Photo Credit : News Kannada

ಬೀದರ್: ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಬಿ.ವೈ ವಿಜಯೇಂದ್ರ ಮೊದಲ ಬಾರಿಗೆ ಬೀದರ್‌ಗೆ ಇಂದು (ಜ.29) ಆಗಮಿಸಿಲಿದ್ದಾರೆ. ರಸ್ತೆ ಮೂಲಕ ಕಲಬುರಗಿಯಿಂದ ಬೀದರ್‌ಗೆ ಆಗಮಿಸಲಿದ್ದು, ಬೂತ್ ಮಟ್ಟದ ಅಧ್ಯಕ್ಷರಾದ ಭೋವಿ ಸಮಾಜದ ಲಾಲಪ್ಪ ಮನೆಗೆ ಭೇಟಿ ನೀಡಿಲಿದ್ದಾರೆ.

ಬಳಿಕ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಚಿಟ್ಟಾವಾಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ವಿಶ್ವ ಗುರು ಬಸವಣ್ಣನವರ ಪುತ್ತಳಿ ಉದ್ಘಾಟನೆಯನ್ನು ಮಾಡಲಿದ್ದಾರೆ.
12 ಗಂಟೆ ಸುಮಾರಿಗೆ ಬೀದರ್ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ಇದೆ.

ನಂತರ ಗಣೇಶ್ ಮೈದಾನದಲ್ಲಿ ಆಯೋಜಿಸಿರುವ ಬಿಜೆಪಿ ಸಮಾರಂಭದ ಸಭೆಯಲ್ಲಿ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ವಿಜಯೇಂದ್ರ ಅವರಿಂದ ಜಿಲ್ಲಾಧ್ಯಕ್ಷರಿಗೆ ಅಭಿನಂದಿಸಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ವಿಜಯೇಂದ್ರ ಅವರನ್ನು ಸ್ವಾಗತಿಸಲು ಬಿಜೆಪಿ ಆಕಾಂಕ್ಷಿಗಳ ಭರದಿಂದ ಸಿದ್ದತೆಯನ್ನು ನಡೆಸಿದ್ದಾರೆ.

ನಗರಾದಾದ್ಯಂತ ವಿಜಯೇಂದ್ರಗೆ ಸ್ವಾಗತ ಕೋರಿದ ಕಟೌಟ್ ಗಳು ರಾರಾಜಿಸುತ್ತಿದ್ದು, ಬಾಹುಬಲಿಯ ವೇಷದಲ್ಲಿ ಬಿ.ವೈ ವಿಜಯೇಂದ್ರ ಬ್ಯಾನರ್ ಅಳವಡಿಕೆ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು