Categories: ಬೀದರ್

ಮಾದರಿ ಔರಾದ ನಿರ್ಮಾಣಕ್ಕಾಗಿ ಆಶೀರ್ವದಿಸಿ: ಪ್ರಭು.ಬಿ ಚವ್ಹಾಣ

ಔರಾದ: ಔರಾದ(ಬಿ) ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿಕೊಂಡು ಕೆಲಸ ಮಾಡುತ್ತಿದ್ದು, ಶಿಕ್ಷಣ, ಆರೋಗ್ಯ, ರೈತರ ಏಳಿಗೆ, ಮೂಲಸೌಕರ್ಯಗಳ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಿದ್ದೇನೆ. ಸಣ್ಣ-ಪುಟ್ಟ ಕೈಗಾರಿಕೆಗಳ ಸ್ಥಾಪನೆಗೆ ಬೇಕಿರುವ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕಂಪನಿಗಳನ್ನು ತಂದು ಯುವಜನತೆಗೆ ಉದ್ಯೋಗಗಳನ್ನು ಒದಗಿಸಬೇಕಿದೆ. ಕ್ಷೇತ್ರವು ಮಾದರಿ ರೀತಿಯಲ್ಲಿ ಪ್ರಗತಿ ಸಾಧಿಸಲು ಅವಕಾಶ ನೀಡಬೇಕೆಂದು ಔರಾದ(ಬಿ) ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಸಚಿವ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು.

ಕಮಲನಗರ ತಾಲ್ಲೂಕಿನ ಠಾಣಾಕುಶನೂರ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷ ಔರಾದ ಮಂಡಲ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.

ಕ್ಷೇತ್ರದ ಮೂರು ಅವಧಿಗೆ ಶಾಸಕನಾಗಿ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ನಾನು ಕೂಡ ಕ್ಷೇತ್ರದ ನಾಲ್ಕು ಲಕ್ಷ ಜನತೆಯನ್ನು ದೇವರಂತೆ ಕಾಣುತ್ತೇನೆ. ಗೌರವಿಸುತ್ತೇನೆ. ಅವರನ್ನು ಪರಿವಾರದ ಸದಸ್ಯರಂತೆ ನೋಡುತ್ತೇನೆ. ಜನರ ಸುರಕ್ಷತೆ ನನ್ನ ಕರ್ತವ್ಯ. ಅದನ್ನು ಸಮರ್ಪಕವಾಗಿ ನಿಭಾಯಿಸಿದ್ದೇನೆ. ಅಭಿವೃದ್ಧಿ ಕೆಲಸಗಳ ಜೊತೆಗೆ ಕಷ್ಟವೆಂದು ಬರುವ ಎಲ್ಲರಿಗೂ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.

ಅಭಿವೃದ್ಧಿಗೆ ಪೂರಕವಾಗಿರುವ ಶಿಕ್ಷಣ ಏಳಿಗೆಯಾಗಬೇಕು. ಕ್ಷೇತ್ರದ ಯುವಕರು ಉತ್ತಮ ಶಿಕ್ಷಣ ಪಡೆದು ಐ.ಎ.ಎಸ್, ಐಪಿಎಸ್, ವೈದ್ಯ ವೃತ್ತಿಯಂತಹ ಉನ್ನತ ಹುದ್ದೆಗಳನ್ನು ಪಡೆಯಬೇಕು ಎಂಬ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಸನ್ಮಾನಿಸಿ ಅವರ ಮನೋಬಲ ವೃದ್ಧಿಸುವ ಕೆಲಸ ಮಾಡುತ್ತಾ ಬಂದಿದ್ದೇನೆ. ಇದರೊಟ್ಟಿಗೆ ಶಿಕ್ಷಕರು ಉತ್ತಮವಾಗಿ ಕೆಲಸ ಮಾಡುವಂತಾಗಲು ಶಿಕ್ಷಕರಿಗೆ ಸನ್ಮಾನಿಸಲಾಗುತ್ತದೆ. ಇದರಿಂದಾಗಿ ಫಲಿತಾಂಶ ಸುಧಾರಣೆಯಾಗಿದೆ. ಹೀಗೆ ಎಲ್ಲ ರಂಗಗಳಲ್ಲಿ ಪ್ರಗತಿಯಾಗಬೇಕು ಎನ್ನುವುದೇ ನನ್ನ ಸದಾಶಯವಾಗಿದೆ ಎಂದರು.

ಈ ಬಾರಿಯ ಚುನಾವಣೆಯಲ್ಲಿ ಅಭಿವೃದ್ದಿ ವಿಷಯಗಳನ್ನು ಮುಂದಿಟ್ಟುಕೊಂಡು ಜನತೆಯ ಮುಂದೆ ಹೋಗುತ್ತಿದ್ದೇನೆ. ಔರಾದ(ಬಿ) ಕ್ಷೇತ್ರದ ಜನತೆ ಉತ್ತಮ ಸ್ಪಂದನೆ ನೀಡುತ್ತಿದ್ದಾರೆ. ಎಲ್ಲೆಡೆಯೂ ಬಿಜೆಪಿಯ ಪರವಾದ ಅಲೆ ಕಾಣಿಸುತ್ತಿದೆ. ಹಿಂದೆಂದಿಗಿಂತಲೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುವುದು ನಿಶ್ಚಿತ ಎಂದು ಹೇಳಿದರು.

ಈ ವೇಳೆ ಮಾಜಿ ಶಾಸಕರಾದ ಗುಂಡಪ್ಪ ವಕೀಲ್ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷವು ಔರಾದ(ಬಿ) ಕ್ಷೇತ್ರಕ್ಕೆ ಯಾವಾಗಲೂ ಹೊರಗಿನ ಅಭ್ಯರ್ಥಿಯನ್ನೇ ನೀಡಿದೆ. ಇದನ್ನು ನಾನು ಸದಾ ಖಂಡಿಸಿದ್ದೇನೆ. ಕಳೆದ ಚುನಾವಣೆಯಲ್ಲಿಯೂ ಕ್ಷೇತ್ರಕ್ಕೆ ಸಂಬAಧವಿಲ್ಲದ ವ್ಯಕ್ತಿಯನ್ನು ಅಭ್ಯರ್ಥಿಯನ್ನಾಗಿಸಿತ್ತು. ಈಗಲೂ ಬೆಂಗಳೂರಿನ ನಿವಾಸಿಯಾಗಿರುವ ವ್ಯಕ್ತಿ ಅಭ್ಯರ್ಥಿಯಾಗಿದ್ದಾರೆ. ಅವರಿಗೆ ಕ್ಷೇತ್ರದ ಬಗ್ಗೆ ಏನೂ ಗೊತ್ತಿಲ್ಲ. ಮೇಲಾಗಿ ವಯೋನಿವೃತ್ತಿಯಾಗಿ 8-10 ವರ್ಷಗಳಾಗಿರುವುದರಿಂದ ಹುರುಪಿನಿಂದ ಕ್ಷೇತ್ರದಲ್ಲಿ ಓಡಾಡುವ ಶಕ್ತಿಯೂ ಅವರಲ್ಲಿಲ್ಲ. ಇವರು ಚುನಾವಣೆ ನಂತರ ಕ್ಷೇತ್ರದ ಜನತೆಯ ಕೈಗೆ ಸಿಗುವುದು ಬಹಳ ಕಷ್ಟ. ಹಾಗಾಗಿ ಪ್ರಬುದ್ಧ ಮತದಾರರು ಈ ಬಗ್ಗೆ ಯೋಚಿಸಬೇಕು. ಸದಾ ಜನರೊಂದಿಗೆ ಇರುವ ಪ್ರಭು.ಬಿ ಚವ್ಹಾಣ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಗಿರುವ ಸಾಧನೆಗಳನ್ನು ಪರಿಗಣಿಸಿ ಮತದಾನ ಮಾಡಬೇಕು. ಕಾರ್ಯಕರ್ತರು ಗ್ರಾಮದಲ್ಲಿರುವ ಕಲಹಗಳನ್ನು ಚುನಾವಣೆಗೆ ಎಳೆದು ತರಬೇಡಿ. ಕ್ಷೇತ್ರ ಒಳಗೊಂಡು ನಾಡಿನ ಅಭಿವೃದ್ಧಿಯ ಹಿತದೃಷ್ಟಿಯಿಂದ ಎಲ್ಲರೂ ಒಂದಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಪಣತೊಡಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಸಲಹೆ ಮಾಡಿದರು.
ಗುಜರಾತ್‌ನ ಮಾಜಿ ಶಾಸಕರಾದ ಅಮಿತ್ ಚೌಧರಿ, ನವದೆಹಲಿಯ  ರಾಷ್ಟ್ರೀಯ ಪ್ರಾಕೃತಿಕ ಚಿಕಿತ್ಸಾ ಸಂಸ್ಥೆಯ ಅನಂತ ಬಿರಾದಾರ, ಮಹಾರಾಷ್ಟçದ ಶಿವಾನಂದ ಹೈಬತಪೂರೆ, ಶರಣು ಹಣಮಶೆಟ್ಟಿ, ಪ್ರವೀಣ ಕಾರಭಾರಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಮಹಾರಾಷ್ಟç ಮುಖಂಡರಾದ ಗಣೇಶ ದಾದಾ ಹಕ್ಕೆ, ಬಾಪುರಾವ ರಾಠೋಡ್, ಅಮೃತರಾವ ವಟಗೆ, ವಸಂತ ಬಿರಾದಾರ, ಸುರೇಶ ಭೋಸ್ಲೆ, ಸಚಿನ್ ರಾಠೋಡ, ಅರಹಂತ ಸಾವಳೆ, ಕಿರಣ ಪಾಟೀಲ, ಅಶೋಕ ಮೇತ್ರೆ, ಗಿರೀಶ ವಡೆಯರ್, ಗಣಪತರಾವ ಕೋಟೆ, ವೆಂಕಟರಾವ ಡೊಂಬಾಳೆ, ನಾರಾಯಣರಾವ ಬಿರಾದಾರ, ಗೋವಿಂದ ಪಾಟೀಲ, ಲಾಲ್ ಅಮರ್, ವೈಜಿನಾಥ ಬೋಚರೆ, ಮೋಹನ ಪಾಟೀಲ, ದೇವಪ್ಪ ತಳವಾಡೆ, ಶಿವಕುಮಾರ, ಕಲೀಂ, ರಾಜಕುಮಾರ ಖೇಮಶೆಟ್ಟಿ, ಗೋಪಾಳ ಬಂಡೆ, ಗೌಸೋದ್ದಿನ್, ತಬರೇಜ್, ಅರವಿಂದ ಮೇತ್ರೆ, ಯೋಗೇಶ ಬಿರಾದಾರ, ಬಾಲಾಜಿ ಬಾಘಮಾರೆ ಹಾಗೂ ಇತರರು ಉಪಸ್ಥಿತರಿದ್ದರು.

Sneha Gowda

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

6 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

6 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

6 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

7 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

8 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

9 hours ago