News Karnataka Kannada
Friday, May 03 2024
ಬೀದರ್

ಜಾತಿ ನಿಂದನೆ: ಆರು ವಾರಗಳಲ್ಲಿ ವರದಿ ಸಲ್ಲಿಕೆಗೆ ಆದೇಶ

ಹೆಂಡತಿ ಕೊಲೆ ಮಾಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆಕೆಯ ಪತಿಗೆ ಬೀದರ್‌ನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
Photo Credit : News Kannada

ಹುಮನಾಬಾದ್: ಇಲ್ಲಿನ ಬಸವತೀರ್ಥ ಮಠದ ಸ್ವಾಮೀಜಿ ವಿರುದ್ಧ ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ವಾರಗಳಲ್ಲಿ ತನಿಖೆ ನಡೆಸಿ ಅಫಿಡೇವಿಟ್‌ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಪೊಲೀಸರಿಗೆ ಆದೇಶಿಸಿದೆ.

ಬಸವತೀರ್ಥ ಮಠದ ಸ್ವಾಮೀಜಿ ಸೇರಿ ಇತರರ ವಿರುದ್ಧ ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಫೆ.18ರಂದು ಪ್ರಕರಣ ದಾಖಲಾಗಿತ್ತು.

ಕಲಬುರಗಿ ಹೈಕೋರ್ಟ್ ಮೂಲಕ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ವಿರುದ್ಧ ಸ್ವಾಮೀಜಿ ತನಿಖೆಗೆ ತಡೆಯಾಜ್ಞೆ ತಂದಿದ್ದರು. ಕಲಬುರಗಿ ಹೈಕೋರ್ಟ್ ಆದೇಶದ ನಂತರ ಅರ್ಜಿದಾರ ಸೋಮ್ಲಾ ಪವಾರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಇದೀಗ ಪ್ರಕರಣ ಕುರಿತು ಸುಪ್ರೀಂ ಕೋರ್ಟ್ ಪರಿಶೀಲನೆ ನಡೆಸಿದೆ. ಈ ಅರ್ಜಿ ವಿಚಾರಣೆಯನ್ನು 2024ರ ಜನವರಿ ಮೂರನೇ ವಾರದಲ್ಲಿ ಪಟ್ಟಿ ಮಾಡುವಂತೆ ಆದೇಶಿಸಿದೆ. ಅಲ್ಲದೇ, ಸ್ವಾಮೀಜಿ ತನಿಖೆಗೆ ಸಹಕರಿಸಬೇಕು ಎಂಬ ಷರತ್ತಿಗೆ ಒಳಪಟ್ಟು ಪೊಲೀಸರು ಅವರನ್ನು ಬಂಧಿಸಬಾರದು ಎಂದೂ ಆದೇಶದಲ್ಲಿ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು