News Karnataka Kannada
Saturday, May 04 2024
ಬೀದರ್

ಡಾ. ಬಿಆರ್. ಅಂಬೇಡ್ಕರ್ ಜಯಂತಿಯನ್ನು ಎಲ್ಲರೂ ಸೇರಿ ಆಚರಿಸೋಣ : ಜಿಲ್ಲಾಧಿಕಾರಿ

ಡಾ।। ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಎಲ್ಲರಿಗೂ ಸೇರಿ ಏಪ್ರಿಲ್ 14 ರಂದು ಸರಳ
Photo Credit : NewsKarnataka

ಬೀದರ್‌:  ಡಾ।। ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಎಲ್ಲರಿಗೂ ಸೇರಿ ಏಪ್ರಿಲ್ 14 ರಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು. ಅವರು ಶನಿವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಕರೆದ ಪೂರ್ವಭಾವಿ ಸಭೆಯಲ್ಲಿ

ಅಧ್ಯಕ್ಷತೆವಹಿಸಿ ಮಾತನಾಡಿದರು. ಲೋಕಸಭಾ ಸಾರ್ವತ್ರಿಕ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕಳೆದ ವರ್ಷ ಆಚರಿಸಿದಂತೆ ಈ ವರ್ಷವು ಅಂಬೇಡ್ಕರ್ ಜಯಂತಿಯನ್ನು ಆಚರಿಸೋಣ. ಏಪ್ರಿಲ್ 14 ರಂದು ಬೆಳಿಗ್ಗೆ 9 ಗಂಟೆಗೆ ಬೀದರ ನಗರದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಲಾಗುತ್ತದೆ. ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿ ಹಾಗೂ ಶಾಲಾ- ಕಾಲೇಜುಗಳಲ್ಲಿ ಅಂದು ಅಂಬೇಡ್ಕರ್ ಪೋಟೊ ಇಟ್ಟು ಪೂಜೆ ಸಲ್ಲಿಸಬೇಕೆಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಅವರು ಮಾತನಾಡಿ ಮೆರವಣಿಗೆ ಸಂದರ್ಭದಲ್ಲಿ ಸಮಯ ನಿಗದಿಪಡಿಸಿ. ಪ್ರತಿ ಏರಿಯಾದಿಂದ ಬರುವ ಮೆರವಣಿಗೆಗೆ ಸ್ವಯಂ ಸೇವಕರನ್ನು ನಿಯೋಜನೆ ಮಾಡಿ ಅಂದಾಗ ನಮ್ಮ ಪೊಲೀಸರು ಅವರನ್ನು ಸಂಪರ್ಕಿಸಲು ಅನುಕೂಲವಾಗುತ್ತದೆ ಮತ್ತು ಮೆರವಣಿಗೆ ಸುಸೂತ್ರವಾಗಿ ನಡೆಯಲು ಅನುಕೂಲವಾಗುತ್ತದೆ ಎಂದರು. ಆಸ್ಪತ್ರೆ ಮತ್ತು ನ್ಯಾಯಾಲಯದ ಆವರಣದಂತಹ ಪ್ರದೇಶಗಳಲ್ಲಿ ಡಿ.ಜೆ. ಹೆಚ್ಚು ಸೌಂಡ ಇಡಬಾರದು. ಚುನಾವಣಾ ನೀತಿ ಸಂಹಿತೆ

ಪ್ರಕಾರ ರಾತ್ರಿ ಹತ್ತು ಗಂಟೆಯ ವರಗೆ ಕಾರ್ಯಕ್ರಮ ಮಾಡಲು ಅವಕಾಶವಿದೆ. ಮೆರವಣಿಗೆ ಪಾಳೆ ಪ್ರಕಾರ ಒಂದಾದ ನಂತರ ಒಂದು ಬಂದರೆ ಯಾವುದೇ ಕನಪ್ಯೂಷನ್ ಆಗುವದಿಲ್ಲ. ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಸಂದರ್ಭದಲ್ಲಿ ಒಂದೊಂದು ಒಳ್ಳೆಯ ಸಂದೇಶಗಳನ್ನು ಬರೆದುಕೊಂಡು ಬರಬೇಕು ಇದರಿಂದ ಸಮಾಜಕ್ಕೆ ಒಂದು ಒಳ್ಳೆಯ ಸಂದೇಶ ಹೋದಂತೆ ಆಗುತ್ತದೆ. ಒಳ್ಳೆಯ ಸಂದೇಶ ಹಾಗೂ ಅಂಬೇಡ್ಕರ್ ಒಳ್ಳೆಯ ಭಾವಚಿತ್ರದೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿದವರಿಗೆ ಬಹುಮಾನ ಕೊಡುವಂತಾಗಬೇಕೆಂದು ಹೇಳಿದರು. ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಗಿರೀಶ್ ಬದೋಲೆ, ಸಮಾಜ ಕಲ್ಯಾಣ

ಇಲಾಖೆಯ ಉಪನಿರ್ದೆಶಕರಾದ ಸಿಂಧು ಎಚ್.ಎಸ್., ಬೀದರ ನಗರಸಭೆ ಆಯುಕ್ತರಾದ ಶಿವರಾಜ ರಾಠೋಡ, ಸಮಾಜದ ಮುಖಂಡರಾದ ಅನಿಲ ಬೆಲ್ದಾರ, ಬಾಬು ಪಾಸ್ವಾನ, ಮಾರುತಿ ಬೌದ್ದೆ, ರಾಜು ಕಡ್ಯಾಳ, ಮಹೇಶ ಗೋರನಾಳಕರ್, ವಿಷ್ಣುವರ್ಧನ್ ವಾಲದೊಡ್ಡಿ, ಕಲ್ಯಾಣರಾವ್ ಬೋಸ್ಥೆ, ರಾಜಕುಮಾರ ಬನ್ನೂರ, ಸುಧಾಕರ್ ಯಕಂಬೆಕರ್, ಫನಾರ್ಂಡೀಸ್ ಹಿಪ್ಪಳಗಾಂವ, ಪಂಡಿತ್ ಚಿದ್ರಿ, ವಿಜಯಕುಮಾರ ಸೋನಾರೆ ಸೇರಿದಂತೆ ಹಲವಾರು ಜನರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು