News Karnataka Kannada
Saturday, May 18 2024
ಬೀದರ್

ಅನ್ನಭಾಗ್ಯ ಯೋಜನೆಗೆ ಕೇಂದ್ರದಿಂದ ಅಡ್ಡಿ: ಸಚಿವ ಈಶ್ವರ್ ಖಂಡ್ರೆ ಕಿಡಿ

Centre obstructing Annabhagya scheme: Minister Ishwar Khandre
Photo Credit : News Kannada

ಬೀದರ್: ರಾಜ್ಯದಲ್ಲಿ 7ಲಕ್ಷ ಟನ್‌ ಅಕ್ಕಿ ಇದ್ದರೂ ಕೇಂದ್ರ ಸರ್ಕಾರ ಕೊಡುತ್ತಿಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ.

ಈ ಸಂಬಂಧ ಬೀದರ್ ನಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರಕ್ಕೆ ಎಫ್‌ಸಿಐ ಅವರು ಅಕ್ಕಿ ಒದಗಿಸುವ ಭರವಸೆ ಕೊಟ್ಟನಂತರವೂ ಬಹಿರಂಗ ಹರಾಜಿನಲ್ಲಿ ರಾಜ್ಯ ಸರ್ಕಾರದವರಿಗೆ ಪರವಾನಿಗೆ ಕೊಡೋದಿಲ್ಲ ಎಂದು ಕೇಂದ್ರ ಬಿಜೆಪಿ ಸರ್ಕಾರ ಹೇಳುತ್ತಿದೆ ಎಂದರು.

ರಾಜ್ಯದಲ್ಲಿ ಎಲ್ಲಿಯವರೆಗೆ ಅಕ್ಕಿ ವ್ಯವಸ್ಥೆ ಆಗುವದಿಲ್ಲವೋ, ಅಲ್ಲಿಯವರೆಗೆ ಬಡ ಜನರಿಗೆ ಧನಸಹಾಯ ಮಾಡುತ್ತೇವೆ. ಮೂರು ತಿಂಗಳಲ್ಲಿ ಅಕ್ಕಿ ಪೂರೈಸಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದರು.

ಇನ್ನು ಬಿಜೆಪಿಯವರಿಗೆ ಕೆಲಸ ಇಲ್ಲದ್ದಕ್ಕೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಅವರು ಕೊಟ್ಟಿರುವ ಭರವಸೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. 15 ಲಕ್ಷ ರು. ಕೊಟ್ಟರಾ? 2ಕೋಟಿ ಉದ್ಯೋಗ? ಸೂರಿಲ್ಲದವರಿಗೆ ಸೂರು ಕೊಟ್ಟರಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಸೋತಿದ್ದಾರೆ, ಹತಾಶ ಭಾವನೆಯಿಂದ ಏನೇನೋ ಹೇಳ್ತಾರೆ. ಅದನ್ನು ಗಂಭೀರವಾಗಿ ಪರಿಗಣಿಸಬಾರದು ಎಂದು ಕೇಳಿ ಕಮಲ ಪಾಳಯಕ್ಕೆ ಈಶ್ವರ ಖಂಡ್ರೆ ಟಾಂಗ್‌ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು