News Karnataka Kannada
Tuesday, April 30 2024
ಬೀದರ್

ಚಂದ್ರಯಾನ-3 ಯಶಸ್ವಿ ಹಿನ್ನಲೆ: ರಾಷ್ಟ್ರಧ್ವಜ ಹಿಡಿದು ಸಂಭ್ರಮಿಸಿದ ಶಾಲೆ ಮಕ್ಕಳು

Chandrayaan-3: School children celebrate by holding national flag
Photo Credit : News Kannada

ಬೀದರ್: ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆ ಔರಾದ್ ತಾಲೂಕಿನ ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ವಿದ್ಯಾರ್ಥಿ ಹಾಗೂ ಶಿಕ್ಷಕರಿಂದ ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡು ಸಂಭ್ರಮಿಸಲಾಯಿತು.

ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಸ್ಪರ್ಶ ಮಾಡಿದ ಸನ್ನಿವೇಶದ ಕುರಿತು ವಿವರಣೆ ನೀಡಿದ ಶಾಲಾ ಶಿಕ್ಷಕ ಬಾಲಾಜಿ ಅಮರವಾಡಿ, ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆ ಕಳುಹಿಸಿ ಯಶಸ್ವಿಯಾದ ಮೊದಲ ದೇಶ ಭಾರತ ಎಂಬುದು ನಮ್ಮೆಲ್ಲರಿಗೂ ಅಭಿಮಾನದ ವಿಷಯ. ಅನೇಕ ಸಂಶೋಧಕರು, ವಿಜ್ಞಾನಿಗಳ ನಿರಂತರ ಪರಿಶ್ರಮದಿಂದ ಇಂದು ಭಾರತ ಐತಿಹಾಸಿಕ ಹೆಜ್ಜೆ ಇಟ್ಟಿದೆ ಎಂದರು.

ಶಿಕ್ಷಕ ಅಂಕುಶ ಪಾಟೀಲ್ ಮಾತನಾಡಿ, ಅತ್ಯಂತ ಕಡಿಮೆ ಬಜೆಟ್‌ನಲ್ಲಿ ಚಂದ್ರಯಾನ ನೌಕೆ ಕಳುಹಿಸಿ ಸಾಧನೆ ಮಾಡಿದ್ದು, ಭಾರತೀಯರ ಬುದ್ದಿವಂತಿಕೆ ಮತ್ತು ಸಾಮರ್ಥ್ಯ ತೋರಿಸುತ್ತದೆ ಎಂದರು.

ಶಾಲೆಯ ಎಲ್ಲ ಮಕ್ಕಳಿಗೆ ಸಿಹಿ ಹಂಚಲಾಯಿತು. ಮಕ್ಕಳು ದೇಶಭಕ್ತಿ ಗೀತೆಗಳ ಮೇಲೆ ಕುಣಿದು ಕುಪ್ಪಳಿಸಿದರು. ದೇಶ ಸೇರಿದಂತೆ ಇಸ್ರೋ ಕುರಿತು ಜೈಘೋಷ ಹಾಕಿದರು.

ಮುಖ್ಯಶಿಕ್ಷಕ ಪ್ರಭು ಬಾಳೂರೆ, ಶಿಕ್ಷಕರಾದ ಜೈಸಿಂಗ್ ಠಾಕೂರ, ವೀರಶೆಟ್ಟಿ ಗಾದಗೆ, ಬಾಲಾಜಿ ಅಮರವಾಡಿ, ಅಕುಶ ಪಾಟೀಲ್, ರೂಪಾ, ಸಿದ್ದೇಶ್ವರಿ ಸ್ವಾಮಿ, ಸೇರಿದಂತೆ ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆಯರು, ಎಕಲಾರ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಗ್ರಾಮಸ್ಥರು ಪಾಲ್ಗೊಂಡು ಸಂಭ್ರಮಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು