ಚಿಟಗುಪ್ಪ: ಕೃಷಿ ಕೆಲಸಕ್ಕಾಗಿ ವಿವಿಧ ಸಂಘಗಳು ಹಾಗೂ ಬ್ಯಾಂಕ್ನಲ್ಲಿ ಮಾಡಿದ ಸಾಲ ಸಕಾಲಕ್ಕೆ ತೀರಿಸಲಾಗದೇ ಖಿನ್ನನಾಗಿ ರೈತನೊಬ್ಬ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಉಡಬಾಳ್ ಗ್ರಾಮದಲ್ಲಿ ಭಾನುವಾರ ಜರುಗಿದೆ.
ಉಡಬಾಳ ಗ್ರಾಮದ ನಿವಾಸಿ ಹಣಮಂತ ಮಾರುತಿ ರೂಪನೋರ್ ( 43 ) ಆತ್ಮಹತ್ಯೆ ಮಾಡಿಕೊಂಡ ರೈತ.
ವಿವಿಧ ಸಂಘಗಳು ಹಾಗೂ ಬ್ಯಾಂಕ್ನಲ್ಲಿ ಸಕಾಲಕ್ಕೆ ಸಾಲ ಮಾಡಿದ್ದು ಸಾಲ ತೀರಿಸಲು ಸಾಧ್ಯವಾಗದ ಕಾರಣ ಖಿನ್ನನಾಗಿ ತನ್ನ ಜಮೀನಿನಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ .
ಈ ಕುರಿತು ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಹಾಯವಾಣಿಗೆ ಕರೆ ಮಾಡಿ:
ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.