ಚಿಟಗುಪ್ಪ: ‘ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ವ-ಸಹಾಯ ಸಂಘಗಳ ಸದಸ್ಯತ್ವ ಪಡೆದುಕೊಂಡು ನಿಯಮ ಪಾಲನೆ ಮಾಡುವ ಮೂಲಕ ಹಣ ಉಳಿತಾಯ ಮಾಡುವುದರಿಂದ ಆರ್ಥಿಕ ಸ್ವಾವಲಂಬನೆ ಸಾಧಿಸಬಹುದು’ ಎಂದು ಶಾಸಕ ಡಾ. ಸಿದ್ದು ಪಾಟೀಲ ಹೇಳಿದರು.
ಇಲ್ಲಿಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಪ್ರಗತಿ ಬಂಧು ಹಾಗೂ ಸ್ವ ಸಹಾಯ ಸಂಘದ ಪಾಲುದಾರ ಫಲಾನುಭವಿಗಳಿಗೆ ಮಂಜೂರಾದ ಆರೋಗ್ಯ ರಕ್ಷಾ ವಿಮೆಯ ಚೆಕ್ ವಿತರಿಸಿ ಮಾತನಾಡಿದರು.
ಬಿಎಸ್ಎಸ್ಕೆ ನಿರ್ದೇಶಕ ಮಲ್ಲಿಕಾರ್ಜುನ ಪಾಟೀಲ ಮಾತನಾಡಿ,’ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ರಾಜ್ಯದ ಎಲ್ಲೆಡೆ ಸ್ವ ಸಹಾಯ ಸಂಘಗಳನ್ನು ರಚಿಸುವ ಮೂಲಕ ಮಹಿಳೆಯರನ್ನು ಆರ್ಥಿಕ ಸಾಕ್ಷರರನ್ನಾಗಿಸುತ್ತಿರುವುದು ಹೆಮ್ಮೆಯ ಸಂಗತಿ’ ಎಂದರು.
ಮಹಿಳೆಯರ ಸಂಘಗಳ ಅಭಿವೃದ್ಧಿಗೆ ಕುಟಂಬದ ಪುರುಷರು ಸಹಕರಿಸಬೇಕು. ಅವರ ಪ್ರಗತಿಗೆ ಪೂರಕವಾಗಿ ದುಡಿಯಬೇಕು. ಅಂದಾಗ ಮಾತ್ರ ಯೋಜನೆಯ ಯಶಸ್ಸು ಪಡೆಯಲು ಸಾಧ್ಯ ಎಂದು ಹೇಳಿದರು.
ಪ್ರವೀಣ, ಡಾ.ನೂಲಾ, ಬಸವರಾಜ, ಯೋಜನಾಧಿಕಾರಿ ವೀರೇಶ, ಶಾಮರಾವ್ ಮತ್ತು ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಸದಸ್ಯರು ಇದ್ದರು.
ಪುರುಷರ ಸಹಕಾರ ಅಗತ್ಯ ಸ್ವ-ಸಹಾಯ ಸಂಘಗಳ ಸದಸ್ಯರಾಗಿ ಪ್ರಗತಿಗೆ ಪೂರಕವಾಗಿ ದುಡಿಯಿರಿ ಎಂದರು.