Categories: ಬೀದರ್

ಚಿಟಗುಪ್ಪ: ಗುಡುಗು ಸಹಿತ ಮಳೆ – ಜನ ಜೀವನ ಅಸ್ತವ್ಯಸ್ತ

ಚಿಟಗುಪ್ಪ:ಚಿಟಗುಪ್ಪ ಪಟ್ಟಣ, ತಾಲ್ಲೂಕಿನೆಲ್ಲೆಡೆ ಭಾನುವಾರ ಸಂಜೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗಿದೆ.

ಗಾಳಿ ಮಳೆಯಿಂದಾಗಿ ವಿವಿಧೆಡೆ ಮನೆಗಳ ಮೇಲಿನ ತಗಡಗಳು ಬಹುದೂರದ ವರೆಗೂ ಹಾರಿಬಿದ್ದಿವೆ. ತಾಲ್ಲೂಖಿನ ನಿರ್ಣಾ, ಮುತ್ತಂಗಿ, ಮನ್ನಾಎಖ್ಖೇಳಿ, ಮೀನಕೇರಾ, ಚಾಂಗಲೇರಾ ಗ್ರಾಮಗಳಲ್ಲಿ ಸಂಜೆ ಅರ್ಧ ಗಂಟೆ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ.

ಗುಡುಗು ಮಿಂಚು ಜನರನ್ನು ಬೆಚ್ಚಿ ಬೀಳುವಂತೆ ಮಾಡಿತು. ಮಿಂಚಿನಿಂದ ಹಲವು ಮನೆಗಳಲ್ಲಿ ವಿದ್ಯುತ್ ಉಪಕರಣಗಳು, ಟಿವಿ ಹಾನಿಗೊಳಗಾಗಿವೆ. ಸುಮಾರು ಅರ್ಧ ಗಂಟೆ ಕಾಲ ಬಿದ್ದ ಮಳೆಯಿಂದ ತಾಪಮಾನ ಕಡಿಮೆಯಾಯಿತು.

ತಾಲ್ಲೂಕಿನ ಮನ್ನಾಎಖ್ಖೇಳಿ ಗ್ರಾಮದ ಚಂದ್ರಮ್ಮ ಲೇಔಟ್‌ನ ರಸ್ತೆ ಪಕ್ಕದಲ್ಲಿಯ ಪವನಕುಮಾರ ಎಂಬುವರ ಟೀ ಸ್ಟಾಲ್‌ ಬಿರುಗಾಳಿಗೆ ಉರುಳಿಬಿದ್ದಿದ್ದು, ಹಾಲು, ಸಕ್ಕರೆ, ಟೀ ಪುಡಿ, ಅಲ್ಲಾ ಇತರ ಪದಾರ್ಥಗಳು ನೀರು ಪಾಲಾಗಿವೆ ಎಂದು ಸ್ಟಾಲ್‌ ಮಾಲೀಕ ಪವನಕುಮಾರ ತಿಳಿಸಿದ್ದಾರೆ.

ಚಾಂಗಲೇರಾ ಕ್ರಾಸ್‌ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಮೇಲೆ ಮರ ಉರುಳಿಬಿದ್ದಿದ್ದು, ಬೈಕ್‌ನ ಟ್ಯಾಂಕ್‌ ಒಡೆದಿದೆ. ಸ್ಥಳದಲ್ಲಿದ್ದ ನಾಗರಿಕರು ಉರುಳಿಬಿದ್ದ ಮರ ಎತ್ತಿ ಬೈಕ್‌ ರಕ್ಷಿಸಿದ್ದಾರೆ.

ಚಿಟಗುಪ್ಪ ತಾಲ್ಲೂಕಿನ ಚಾಂಗಲೇರಾ ಕ್ರಾಸ್‌ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಮೇಲೆ ಮರ ಉರುಳಿಬಿದ್ದಿದ್ದು ಬೈಕ್‌ಗೆ ಹಾನಿ ಸಂಭವಿಸಿದೆ.

Ashika S

Recent Posts

ಪ್ರತಿ ಬೂತ್ ನಲ್ಲಿ ಬಿಜೆಪಿ ಪರ ಅಲೆ, ಕಾರ್ಯಕರ್ತರಲ್ಲಿ ಅತ್ಯುತ್ಸಾಹ : ಪ್ರಕಾಶ ಅಕ್ಕಲಕೋಟ.

ವಿಜಯಪುರ ಲೋಕಸಭಾ ಕ್ಷೇತ್ರದ ಪ್ರತಿಯೊಂದು ಬೂತ್ ಗಳಲ್ಲಿ ಬಿಜೆಪಿ‌ ಪರ ಉತ್ತಮ ವಾತಾವರಣ ಸೃಷ್ಟಿಯಾಗಿದ್ದು, ಬಿಜೆಪಿ ಪರ‌ ಅಲೆ‌ ಇದೆ…

32 seconds ago

ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪ: ಐವರ ಬಂಧನ

ಬೆಳಗಾವಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪದಲ್ಲಿ ಹಣದ ಸಮೇತ ನಾಲ್ವರು ಸಿಕ್ಕಿಬಿದ್ದ ಘಟನೆ…

7 mins ago

ಬಿಜೆಪಿ ಸುಳ್ಳು ಇನ್ನು ನಡೆಯಲ್ಲ: ಲಕ್ಷ್ಮಣ ಸವದಿ ವಾಗ್ದಾಳಿ

ಮೋದಿ ಮತ್ತವರ ಬಳಗ ಮತ್ತು ಬಿಜೆಪಿಯವರ ಸುಳ್ಳುಗಳನ್ನು ಜನ ಅರಿತಿದ್ದು, ಈ ಸಲ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಮಾಜಿ…

38 mins ago

ಗ್ಯಾರಂಟಿಗಳು ಕಾಂಗ್ರೆಸ್ ಹಾಗು ಖಂಡ್ರೆ ಗೆಲುವಿಗೆ ಶ್ರೀರಕ್ಷೆ

ಜನಸಾಮಾನ್ಯರಿಗೆ ಆಸರೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ್…

49 mins ago

ಅಶ್ಲೀಲ ವಿಡಿಯೋ ಪ್ರಕರಣ: ಹೆಚ್​ಡಿ ರೇವಣ್ಣ ಬಂಧನ

ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣರನ್ನು ವಿಶೇಷ ತನಿಖಾ ದಳದ  ಅಧಿಕಾರಿಗಳು…

59 mins ago

ಅನ್ಯದೇಶಿಗರಿಗೆ ಭಾರತ ಮುಕ್ತವಾಗಿಲ್ಲ ಎಂದ ಬೈಡನ್‌ಗೆ ಉತ್ತರಿಸಿದ ಜೈಶಂಕರ್‌

ಭಾರತ ಸೇರಿದಂತೆ ಹಲವು ದೇಶಗಳು ಅನ್ಯದೇಶಿಗರಿಗೆ ತೆರೆದುಕೊಂಡಿಲ್ಲ ಎಂದ ಅಮೇರಿಕಾ ಅಧ್ಯಕ್ಷ ಜೋ ಬೈಡನ್‌ರ ಹೇಳಿಕೆಗೆ ಪ್ರತಿಕ್ರಿಯಿಸಿದ ಭಾರತದ ವಿದೇಶಾಂಗ…

60 mins ago