Categories: ಬೀದರ್

ನನ್ನೆದುರು ಸ್ಪರ್ಧಿಸಲು ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳಿಲ್ಲ: ಭಗವಂತ ಖೂಬಾ

ಔರಾದ: ಬೀದರ್ ಲೋಕಸಭೆ ಚುನಾವಣೆಯಲ್ಲಿ ನಮ್ಮ ವಿರುದ್ಧ ಸ್ಪರ್ಧೆ ಮಾಡಲು ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಅವರ ಪಕ್ಷದಲ್ಲಿ ಸಮರ್ಥ ಅಭ್ಯರ್ಥಿಗಳೇ ಸಿಗುತ್ತಿಲ್ಲಾ, ಎಲ್ಲವೂ ರಿಜೆಕ್ಟ್ ಕ್ಯಾಂಡಿಡೇಟ್ ಇದ್ದಾರೆ. ಈ ಬಾರಿ ಎರಡು ಲಕ್ಷ ಮತಗಳ ಅಂತರದಿಂದ ನಮ್ಮ ಗೆಲುವು ಖಚಿತವಾಗಿದೆ ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

ಮೂರನೇ ಬಾರಿ ಬಿಜೆಪಿ ಬೀದರ ಲೋಕಸಭೆ ಅಭ್ಯರ್ಥಿಯಾಗಿ ಟಿಕೆಟ್ ಘೋಷಣೆಯಾದ ಬಳಿಕ ಪಟ್ಟಣದ ಅಮರೇಶ್ವರ ಮಂದಿರಕ್ಕೆ ಬಂದು ದರ್ಶನ ಪಡೆದು ಮಾತಾಡಿದರು.

ಕಳೆದ ಹತ್ತು ವರ್ಷದ ಅವಧಿಯಲ್ಲಿ ನಾವು ಮಾಡಿರುವ ಅಭಿವೃದ್ಧಿಯ ಕಾಮಗಾರಿಗಳು ಹಾಗೂ ದೇಶದ ಹೆಮ್ಮೆಯ ಪ್ರಧಾನಿ ಮಾರ್ಗದರ್ಶನದಲ್ಲಿ ನಡೆದುಕೊಂಡು ಬಂದ ನಮ್ಗೆ ಈ ಬಾರಿ ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಿಗಲ್ಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಆರಾಧ್ಯ ದೇವ ಅಮರೇಶ್ವರ ಆರ್ಶಿವಾದ ಹಾಗೂ ಬೀದರ ಲೋಕಸಭೆ ಕ್ಷೇತ್ರದ ಮತದಾರರ ಆಶೀರ್ವಾದ ನಮ್ಮ ಬೆನ್ನಿಗೆ ಇರುವಾಗ ಚುನಾವಣೆ ಹಾಗೂ ಟಿಕೆಟ್ ಪಡೆಯಲು ನಮ್ಮಗೆ ಸಮಸ್ಯೆಯಾಗಿಲ್ಲಾ. ರಾಜಕೀಯದಲ್ಲಿ ಅಡೆ ತಡೆಗಳು ಬರುವುದು ಸರ್ವ ಸಾಮಾನ್ಯವಾಗಿದೆ. ಅದನ್ನು ಶಾಂತಿಯಿಂದ ನಿಭಾಯಿಸಿಕೊಂಡು ಹೋಗುವುದೊಂದೆ ದೊಡ್ಡ ಸಾಧನೆಯಾಗುತ್ತದೆ ಎಂದರು.

ಬಿಜೆಪಿ ಪಕ್ಷದ ಮುಖಂಡರ ಮದ್ಯೆ ವೈಮನಸ್ಸಿದೆ ಎನ್ನುವುದು ಗಾಳಿ ಸುದ್ದಿ. ಪಕ್ಷದಲ್ಲಿರುವ ನಾವೆಲ್ಲರೂ ಒಂದೇ ಕುಟುಂಬದ ಸದಸ್ಯರಂತೆ ಇದ್ದೇವೆ. ಇದೆಲ್ಲವೂ ಕಾಂಗ್ರೆಸ್ ಪಕ್ಷದ ಶಕುನಿ ತಂತ್ರವಾಗಿದೆ. ಪಕ್ಷದಲ್ಲಿ ಒಡಕಿದೆ ಎಂದರೆ ತಮಗೆ ಅದರ ಲಾಭ ಸಿಗುತ್ತದೆ ಎನ್ನುವ ಹಗಲು ಕನಸು ಕಾಂಗ್ರೆಸ್ ಪಕ್ಷದ ಮುಖಂಡರು ಕಾಣುವುದನ್ನು ಬಿಟ್ಟು ತಾವು ಮಾಡಿರುವ ಸಾಧನೆಗಳ ಬಗ್ಗೆ ಜನತೆಯ ಮುಂದೆ ತಿಳಿಸಿ ಮತ ಕೇಳಲು ಮುಂದಾಗಿ ಎಂದು ಕೈ ನಾಯಕರ ವಿರುದ್ಧ ಖೂಬಾ ಮಾತಿನ ಸಮರ ಸಾರಿದರು.

ಮುಖಂಡ ಬಂಡೆಪ್ಪ ಕಂಟೆ, ದೀಪಕ ಪಾಟೀಲ್, ಸಂತೋಷ ಪಾಟೀಲ್ ದಯಾನಂದ ಹಳಿಖೇಡೆ, ಶರಣಪ್ಪ ಪಂಚಾಕ್ಷರೆ, ಸಚೀನ ಎಡವೆ, ಪ್ರಕಾಶ ಟೋಣ್ಣೆ, ಶ್ರೀರಂಗ ಪರಿಹಾರ, ರವೀಂದ್ರ ಮೀಸೆ, ರಾಜಕುಮಾರ ಮೀಸೆ, ರಾಜಕುಮಾರ ಚಿದ್ರೆ, ಶ್ರೀನಿವಾಸ ಖೂಬಾ, ಗುಂಡಯ್ಯಾ ಸ್ವಾಮಿ, ಅಮರ ಎಡವೆ, ರಾಜಹಂಸ ಶಟಕಾರ ಸೇರಿದಂತೆ ಇನ್ನಿತರರು ಇದ್ದರು.

Ashika S

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

24 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

37 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

1 hour ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

2 hours ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

2 hours ago