News Karnataka Kannada
Sunday, May 05 2024
ಬೀದರ್

ಭಾತಂಬ್ರಾ ಗ್ರಾಮದ ಪ್ರಮುಖರು ಕಾಂಗ್ರೆಸ್‌ಗೆ ಸೇರ್ಪಡೆ

ಭಾಲ್ಕಿ: ತಾಲ್ಲೂಕಿನ ಭಾತಂಬ್ರಾ ಗ್ರಾಮದ ಪ್ರಮುಖರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
Photo Credit : NewsKarnataka

ಬೀದರ್‌:   ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಪ್ರಮುಖರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನಿವಾಸದಲ್ಲಿ ಭಾನುವಾರ ಸಚಿವ ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ಸೇರ್ಪಡೆಗೊಂಡ ಪಿಕೆಪಿಎಸ್ ಅಧ್ಯಕ್ಷ ಸತೀಶ ಬಿರಾದಾರ, ಉಪಾಧ್ಯಕ್ಷ ಚಂದ್ರಕಾಂತ ಕುಟಮಲಗೆ, ಪ್ರೇಮನಾಥ ಗಾಮಾ, ಗುಂಡು ಅಹಮದಾಬಾದೆ, ಮಹಾದೇವ ಅಹಮದಾಬಾದೆ, ಶಿವರಾಜ ಧೂಳೆ, ಮಹಾದೇವ ಕುಟಮಲಗೆ ಸೇರಿದಂತೆ ಇತರ ಪ್ರಮುಖರಿಗೆ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ನಂತರ ಮಾತನಾಡಿದ ಖಂಡ್ರೆ, ‘ಕಳೆದ ಎರಡು ಅವಧಿಯಿಂದ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಭಗವಂತ ಖೂಬಾ ಅವರು ಜಿಲ್ಲೆಯ ಅಭಿವೃದ್ಧಿಗೆ ಹೇಳಿಕೊಳ್ಳುವಂತಹ ಕೊಡುಗೆ ನೀಡಿಲ್ಲ. ಕಾರ್ಯಕರ್ತರು ಸಂಸದರ ವೈಫಲ್ಯವನ್ನು ಜನರ ಮುಂದಿಟ್ಟು ಕಾಂಗ್ರೆಸ್ ಗೆಲ್ಲಿಸಲು ಶ್ರಮಿಸಬೇಕು’ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಜಯಕುಮಾರ ಗಾಮಾ, ಸದಸ್ಯರಾದ ಜೈರಾಜ ಪಾಟೀಲ, ಶಿವಕುಮಾರ ಕಾಪಸೆ, ರವೀಂದ್ರ ಚಿಡಗುಪ್ಪೆ, ಪ್ರಮುಖರಾದ ಓಂಕಾರ ರಾಮಶೆಟ್ಟೆ, ಭಯ್ಯ, ಸಂಜು ಚಿದ್ರೆ, ಸಂತೋಷ ರೊಡ್ಡೆ, ಮಂತ್ರಿ, ಮುಸ್ತಾಕ್ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು