News Karnataka Kannada
Saturday, May 11 2024
ಬೀದರ್

ಬೀದರ್‌ನಲ್ಲಿ ಎಂಟು ದಿನದ ಬಳಿಕ ಕಲುಷಿತ ನೀರು ಪೂರೈಕೆ

ಕುಡಿಯುವ ನೀರಿಗಾಗಿ ಕಳೆದ ಎಂಟು ದಿನಗಳಿಂದ ಕಾಯುತ್ತ ಕುಳಿತ ಪಟ್ಟಣದ ಜನರಿಗೆ ಬುಧವಾರ ಕಲುಷಿತ ನೀರು ಪೂರೈಕೆಯಾಗಿದೆ.
Photo Credit : NewsKarnataka

ಔರಾದ್: ಕುಡಿಯುವ ನೀರಿಗಾಗಿ ಕಳೆದ ಎಂಟು ದಿನಗಳಿಂದ ಕಾಯುತ್ತ ಕುಳಿತ ಪಟ್ಟಣದ ಜನರಿಗೆ ಬುಧವಾರ ಕಲುಷಿತ ನೀರು ಪೂರೈಕೆಯಾಗಿದೆ.ಹಾಲಹಳ್ಳಿ ಬ್ಯಾರೇಜ್‍ನಿಂದ ಪಟ್ಟಣದ ವಿವಿಧ ವಾರ್ಡ್‍ಗಳಿಗೆ ಪೂರೈಸಿದ ನೀರು ಕುಲುಷಿತವಾಗಿದ್ದು, ಕುಡಿಯಲು ಅಷ್ಟೇ ಅಲ್ಲ, ಬಳಸಲು ಯೋಗ್ಯ ಅಲ್ಲ ಎಂದು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಷ್ಟು ದಿನ ನೀರು ಬಂದ್ರೆ ಸಾಕು ಅಂತಿದ್ವಿ, ಈಗ ಬಂದ ನೀರು ಕುಡಿದ್ರೆ ಬದುಕ್ತೀವಿ ಅನ್ನೋ ನಂಬಿಕೆನೇ ಇಲ್ಲ’ ಎಂದು ಈ ಕಲುಷಿತ ನೀರು ಪೂರೈಕೆ ಕುರಿತು ಗಾಂಧಿ ಚೌಕ್‍ನ ವಾರ್ಡ್ ನಂಬರ್ 7ರ ಮಹಿಳೆಯರು ಗೋಳು ತೋಡಿಕೊಂಡಿದ್ದಾರೆ.

‘ನಾವು ಬೇಸಿಗೆ ಆರಂಭದಿಂದಲೂ ಕುಡಿಯುವ ನೀರಿನ ಕೊರತೆ ಎದುರಿಸುತ್ತಿದ್ದೇವೆ. ಎಂಟು ದಿನಗಳಿಂದ ಹನಿ ನೀರು ಬಂದಿಲ್ಲ. ಈಗ ಬಂದಿರುವ ನೀರು ಗಬ್ಬು ವಾಸನೆ ಬರುತ್ತಿವೆ. ಜಾನುವಾರುಗಳು ಕುಡಿಯುತ್ತಿಲ್ಲ’ ಎಂದು ಪ್ರವಾಸಿ ಬಂದಿರದ ಬಳಿಯ ಶಿವನಗರ ಬಡಾವಣೆ ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ನೀರಿನ ಸಮಸ್ಯೆ ಕುರಿತು ನಿರಂತರವಾಗಿ ಸಂಬಂಧಿತರ ಗಮನಕ್ಕೆ ತರುತ್ತಿದ್ದೇವೆ. ನಾಳೆ ಬರುತ್ತೆ, ನಾಡಿದ್ದು ಬರುತ್ತೆ ಎಂದು ಕಳೆದ ಎಂಟು ದಿನಗಳಿಂದ ಹೇಳುತ್ತಿದ್ದಾರೆ. ಆದರೆ ಇಂದು ಪೂರೈಕೆಯಾಗಿದ್ದು ಕುಡಿಯುವ ನೀರಲ್ಲ. ಬದಲಿಗೆ ಹೊಸಲು ನೀರು’ ಎಂದು ಸಾಮಾಜಿಕ ಕಾರ್ಯಕರ್ತ ಅನೀಲ ಜಿರೋಬೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು