News Karnataka Kannada
Thursday, May 02 2024
ಬೀದರ್

ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿದ್ದಕ್ಕೆ ಡೈರಿ ಕರೆಂಟ್‌ ಕಟ್‌, ಹಾಲು ಸುರಿದು ಆಕ್ರೋಶ

Dairy power cut, milk poured out for non-payment of dues
Photo Credit : News Kannada

ಬೀದರ್: ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿದ್ದಕ್ಕೆ ಡೈರಿ ಕರೆಂಟ್‌ ಕಟ್‌ ಮಾಡಿದ್ದರಿಂದ ಸುಮಾರು ಮೂರು ಸಾವಿರ ಲೀಟರ್‌ ಹಾಳಾಗಿದ್ದು, ಡೈರಿ ಮಾಲೀಕರು ನಗರದ ಜೆಸ್ಕಾಂ ಕಚೇರಿ ಎದುರು ಸೋಮವಾರ ರಾತ್ರಿ ಹಾಲು ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ‘ಲೋಕಲ್‌ ಫಾರ್ಮ್‌’ ಡೈರಿ ಜೆಸ್ಕಾಂಗೆ ₹1.30 ಲಕ್ಷ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡಿತ್ತು.

ಸೋಮವಾರ ಬೆಳಿಗ್ಗೆ ಡೈರಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು. ಇದರಿಂದಾಗಿ ಮೂರು ಸಾವಿರ ಲೀಟರ್‌ ಹಾಲು ಕೆಟ್ಟು ಹೋಗಿದೆ. ತೀವ್ರ ನಷ್ಟವಾಗಿದ್ದಕ್ಕೆ ಸಿಟ್ಟಾಗಿ ಕ್ಯಾನ್‌ಗಳಲ್ಲಿ ಹಾಲು ತಂದು ಜೆಸ್ಕಾಂ ಕಚೇರಿ ಎದುರು ಸುರಿದರು.

‘ನಮ್ಮ ಡೈರಿಯಿಂದ ₹1.30 ಲಕ್ಷ ವಿದ್ಯುತ್‌ ಬಿಲ್‌ ಕಟ್ಟಬೇಕಿತ್ತು. ₹45 ಸಾವಿರ ಕಟ್ಟಿದ್ದೆವು. ಶುಕ್ರವಾರ ₹50 ಸಾವಿರ ಮೊತ್ತದ ಚೆಕ್‌ ನೀಡಿದ್ದೇವೆ. ಚೆಕ್‌ ಕ್ಲೇಮ್‌ ಮಾಡಿಕೊಳ್ಳದೆ ಏಕಾಏಕಿ ಬಂದು ಬೆಳಿಗ್ಗೆ ವಿದ್ಯುತ್‌ ಸಂಪರ್ಕ ಕಟ್‌ ಮಾಡಿದ್ದಾರೆ. ನೋಟಿಸ್‌ ಕೂಡ ನೀಡಿಲ್ಲ. ನಿತ್ಯ 25 ಹಳ್ಳಿಗಳ ರೈತರು ನಮಗೆ ಹಾಲು ಮಾರಾಟ ಮಾಡುತ್ತಾರೆ. ಸಂಗ್ರಹವಾಗಿದ್ದ ಹಾಲು ಹಾಗೂ ಹಾಲಿನ ಇತರೆ ಉತ್ಪನ್ನಗಳು ಹಾಳಾಗಿದ್ದು, ₹4 ಲಕ್ಷ ಮೌಲ್ಯದ ನಷ್ಟವಾಗಿದೆ.

ಮಂಗಳವಾರ ಪುನಃ ರೈತರು ಹಾಲು ತೆಗೆದುಕೊಂಡು ಬರುತ್ತಾರೆ. ಕರೆಂಟ್‌ ಇಲ್ಲದ ಕಾರಣ ಸಂಗ್ರಹಿಸಲು ಆಗುವುದಿಲ್ಲ. ಇದಕ್ಕೆ ಯಾರು ಹೊಣೆ. ನಷ್ಟವನ್ನು ಜೆಸ್ಕಾಂ ಅಧಿಕಾರಿಗಳು ಭರಿಸಬೇಕು’ ಎಂದು ಡೈರಿ ಮಾಲೀಕರಾದ ಶಾಂತಬಾಯಿ ಹಾಗೂ ಅಜಯ್ ಬಿರಾದಾರ್ ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು