News Karnataka Kannada
Saturday, May 18 2024
ಬೀದರ್

ಈ ಸಲ ಖೂಬಾ ಸೋಲು ಖಚಿತ: ಬಿಜೆಪಿ ಸದಸ್ಯ ಪದ್ಮಾಕರ ಪಾಟೀಲ

ಕೇಂದ್ರ ಸಚಿವ ಭಗವಂತ ಖೂಬಾ ಅವರು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಏನೂ ಮಾಡಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಆದರೆ, ಈ ಸಲ ಅವರ ಸೋಲು ಖಚಿತ' ಎಂದು ಬಿಜೆಪಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪದ್ಮಾಕರ ಪಾಟೀಲ ಹೇಳಿದರು.
Photo Credit : NewsKarnataka

ಬೀದರ್ : ಕೇಂದ್ರ ಸಚಿವ ಭಗವಂತ ಖೂಬಾ ಅವರು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಏನೂ ಮಾಡಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಆದರೆ, ಈ ಸಲ ಅವರ ಸೋಲು ಖಚಿತ’ ಎಂದು ಬಿಜೆಪಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪದ್ಮಾಕರ ಪಾಟೀಲ ಹೇಳಿದರು.

‘ಬಿಜೆಪಿ ಬಂಡಾಯ ಅಭ್ಯರ್ಥಿ ಡಾ. ದಿನಕರ್‌ ಮೋರೆ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆಯವರ ನಡುವೆ ಬೀದರ್‌ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ನೇರ ಸ್ಪರ್ಧೆ ಇದೆ. ಸದ್ಯ ಬಿಜೆಪಿ ಮೂರನೇ ಸ್ಥಾನದಲ್ಲಿದೆ’ ಎಂದು ಹೇಳಿಸಿದರು.

ಖೂಬಾ ಅವರು ಹತ್ತು ವರ್ಷಗಳಲ್ಲಿ ಯುವಕರಿಗಾಗಿ ಏನೂ ಮಾಡಿಲ್ಲ. ಲಿಂಗಾಯತ ಕೋಟಾದಡಿ ಗೆದ್ದು ಮಂತ್ರಿ ಪದವಿ ಗಿಟ್ಟಿಸಿಕೊಂಡಿದ್ದಾರೆ. ಸಂಪರ್ಕಕ್ಕಾಗಿ ರಾಷ್ಟ್ರೀಯ ಹೆದ್ಧಾರಿಗಳನ್ನು ನಿರ್ಮಿಸಲಾಗಿದೆ. ಮೊದಲಿನಿಂದಲೂ ರೈಲು ಸಂಪರ್ಕ ಇದೆ. ಖೂಬಾ ಅವರೇನು ಹೊಸದಾಗಿ ಮಾಡಿಲ್ಲ. ಆರು ತಿಂಗಳು ವಿಮಾನ ಹಾರಾಡುತ್ತದೆ ಆರು ತಿಂಗಳು ನಿಲ್ಲುತ್ತದೆ’ ಎಂದು ವ್ಯಂಗ್ಯವಾಡಿದರು.

‘ಈ ಸಲ ದಿನಕರ್ ಮೋರೆಯವರಿಗೆ ಬಿಜೆಪಿಯಲ್ಲಿರುವ ಅನೇಕರು ಪರೋಕ್ಷವಾಗಿ ಬೆಂಬಲಿಸುತ್ತಿದ್ದಾರೆ. ಹೆಸರಿಗಷ್ಟೇ ಖೂಬಾ ಅವರೊಂದಿಗೆ ಓಡಾಡುತ್ತಿದ್ದಾರೆ. ಹತ್ತು ವರ್ಷಗಳಲ್ಲಿ ಖೂಬಾ ಅವರು ಏನೆಲ್ಲ ಮಾಡಬಹುದಿತ್ತು. ಕನಿಷ್ಠ ಒಂದು ಸಾವಿರ ಯುವಕರಿಗೆ ಕೆಲಸ ಕೊಡಿಸಲೂ ಅವರಿಗೆ ಆಗಿಲ್ಲ’ ಎಂದು ಟೀಕಿಸಿದರು.

ಡಾ.ದಿನಕರ್‌ ಮೋರೆ ಮಾತನಾಡಿ, ‘ತನ್ನ ಅವಧಿಯಲ್ಲಿ ಖೂಬಾ ಅವರು ಮಿತ್ರರಿಗಿಂತ ಶತ್ರುಗಳನ್ನೇ ಹುಟ್ಟುಹಾಕಿದ್ದಾರೆ. ಖೂಬಾ ಅಧಿಕಾರದ ಮದದಲ್ಲಿ ಮುಳುಗಿದ್ದಾರೆ’ ಎಂದು ಟೀಕಿಸಿದರು.

‘ಭಗವಂತ ಖೂಬಾ ಅವರು ತಮ್ಮ ಮುಂದಿನ ಯೋಜನೆಗಳ ಬಗ್ಗೆ ಒಮ್ಮೆಯೂ ಮಾತನಾಡಿರುವುದನ್ನು ನಾನು ಎಲ್ಲಿಯೂ ಕೇಳಿಲ್ಲ. ಇನ್ನು, ಖಂಡ್ರೆಯವರು ಕುಟುಂಬ ರಾಜಕಾರಣದಲ್ಲಿ ಮುಳುಗಿದ್ದಾರೆ. ನಾನು ಗೆದ್ದರೆ ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ ತರುವೆ. ಐ.ಟಿ. ಹಬ್‌ ಸ್ಥಾಪನೆಗೆ ಶ್ರಮಿಸುವೆ’ ಎಂದರು.

ಜನಧ್ವನಿ ಸಂಘಟನೆಯ ಅಧ್ಯಕ್ಷ ಅಂಕುಶ ಗೋಖಲೆ ಮಾತನಾಡಿ, ‘ಪ್ರಜ್ವಲ್‌ ರೇವಣ್ಣ ಜಗತ್ತಿನಲ್ಲಿ ಯಾರೂ ಮಾಡದ ಹೇಯ ಕೃತ್ಯ ಎಸಗಿದ್ದಾನೆ. ಅದನ್ನು ಬಿಜೆಪಿ, ಆರ್‌ಎಸ್‌ಎಸ್‌ನವರು ಖಂಡಿಸಿಲ್ಲ. ನೇಹಾ ಕೊಲೆಯಾದಾಗ ಹಿಂದೂಗಳ ಹತ್ಯೆ ಎಂದು ಮರುಕಪಟ್ಟಿದ್ದರು. ಆದರೆ, ಕೊಲೆಯಾದ ಸೌಜನ್ಯ, ದಾನಮ್ಮ ಹಿಂದೂಗಳಾಗಿರಲಿಲ್ಲವೇ?’ ಎಂದು ಪ್ರಶ್ನಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು