News Karnataka Kannada
Sunday, May 05 2024
ಬೀದರ್

ರೈತರ ಖಾತೆಗೆ ಪರಿಹಾರ ಹಣ ಜಮಾ: ಶಾಸಕ ಬಂಡೆಪ್ಪ ಖಾಶೆಂಪುರ್ ಒತ್ತಾಯ

Deposit compensation money to farmers'
Photo Credit : News Kannada

ಬೀದರ್ (ಮಾ.21): ಮುಖ್ಯಮಂತ್ರಿಗಳು ಬೆಳೆ ಹಾನಿ ಪರಿಹಾರಕ್ಕಾಗಿ ಮಂತ್ರಿಗಳ ಹೆಸರು ಹೇಳಬಾರದು. ಕೂಡಲೇ ನಾಲ್ಕೈದು ದಿನಗಳಲ್ಲಿ ರೈತರ ಖಾತೆಗಳಿಗೆ ಪರಿಹಾರದ ಹಣ  ಜಮಾ ಮಾಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಖಾಶೆಂಪುರ್   ಒತ್ತಾಯಿಸಿದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಡಬಾಳ, ನಾಗನಕೇರಾ, ನಿರ್ಣಾ, ಮನ್ನಾಎಖೇಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಜಮೀನುಗಳಿಗೆ ಸೋಮವಾರ ಭೇಟಿ ನೀಡಿ ಇತ್ತೀಚೆಗೆ ಸುರಿದ ಅಕಾಲಿಕ ಮಳೆ ಮತ್ತು ಆಣೆಕಲ್ಲುಗಳಿಂದ ಹಾನಿಗೊಳಗಾದ ಉಳ್ಳಾಗಡ್ಡಿ, ಮಾವು, ಟೊಮ್ಯಾಟೊ, ಜೋಳ, ಹೀರೇಕಾಯಿ ಸೇರಿದಂತೆ ವಿವಿಧ ಬೆಳೆಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ವೀಕ್ಷಿಸಿ ಅವರು ಮಾತನಾಡಿದರು.

ನಾನು ಎರಡು ದಿನಗಳಿಂದ ಸುಮಾರು ಹಳ್ಳಿಗಳ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆಹಾನಿಯನ್ನು ಗಮನಿಸಿದ್ದೇನೆ. ಹೀರೇಕಾಯಿ ಬೆಳೆದ ರೈತನ ತೋಟಕ್ಕೆ ಬಂದು ನೋಡಿದ್ದಿನಿ. ಎರಡೇ ಎರಡು ದಿನಗಳಲ್ಲಿ ಕಟಾವು ಮಾಡಬೇಕಿದ್ದ ಬೆಳೆ ಸಂಪೂರ್ಣ ಹಾಳಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ. ಹೀರೇಕಾಯಿ, ಇರುಳಿ, ಟೊಮ್ಯಾಟೊ, ಜವೆ ಗೋದಿ, ಜೋಳ, ಮಾವು ಸೇರಿದಂತೆ ಅನೇಕೆ ಬೆಳೆಗಳು ಸಂಪೂರ್ಣ ಹಾಳಾಗಿವೆ.

ಸರ್ಕಾರ ಎನ್.ಡಿ.ಆರ್.ಎಫ್ ನಾರ್ಮ್ ಮೇಲೆ ಹೋಗಬಾರದು. ಅದು ಬಹಳಷ್ಟು ಕಡಿಮೆ ಇದೆ. ಕೃಷಿ ಬೆಳೆಗಳಿಗೆ ಎಕರೆಗೆ 25 ಸಾವಿರ ರೂ. ತೋಟಗಾರಿಕೆ ಬೆಳೆಗಳಿಗೆ ಎಕರೆಗೆ 50 ಸಾವಿರ ರೂ. ಪರಿಹಾರ ಧನವನ್ನು ನೀಡಬೇಕು. ಆಗ ಮಾತ್ರ ರೈತರು ಉಸಿರಾಡಲು ಸಾಧ್ಯವಾಗುತ್ತದೆ.  ನಮ್ಮ ಭಾಗದಲ್ಲಿ ಆನೆಕಲ್ಲಿನಿಂದ   ಬೆಳೆಗಳು ಹಾನಿಯಾಗಿವೆ. ಮುಖ್ಯಮಂತ್ರಿಗಳು ರೈತರ ಪರವಾಗಿ ಧಾವಿಸಿ ಬರಬೇಕು. ರೈತರಿಗೆ ಕೂಡಲೇ ನಾಲ್ಕೈದು ದಿನಗಳಲ್ಲಿ ಪರಿಹಾರ ಒದಗಿಸುವ ಕೆಲಸ ಮಾಡಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸರ್ಕಾರಕ್ಕೆ ಮನವಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು