ಬೀದರ್ (ಏ.30): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ಓಡಿ ಹೋಗುವ ಗಿರಾಕಿಗಳಿಗೆ ಮನ್ನಣೆ ನೀಡಬೇಡಿ. ಸದಾ ನಿಮ್ಮ ಜೊತೆಗೆ ಇರುವ ನನ್ನನ್ನು ಹೆಚ್ಚಿನ ಬಹುಮತದೊಂದಿಗೆ ಗೆಲ್ಲಿಸಿ ಎಂದು ಕ್ಷೇತ್ರದ ಶಾಸಕರು, ಜೆಡಿಎಸ್ ಅಭ್ಯರ್ಥಿಯಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂದಕನಳ್ಳಿ, ಕಂಗನಕೋಟ್, ಶಮಶೀರನಗರ ನಗರ, ಬಾವಗಿ, ನೆಲವಾಳ, ಸಂಗೊಳಗಿ, ಸಂಗೊಳಗಿ ಎ,ಬಿ,ಸಿ,ಡಿ ತಾಂಡಗಳು ಸೇರಿದಂತೆ ಅನೇಕ ಗ್ರಾಮ ಮತ್ತು ತಾಂಡಗಳಲ್ಲಿ ಶನಿವಾರ ಮತಯಾಚನೆ ನಡೆಸಿ ಮಾತನಾಡಿದ ಅವರು, ನಾನು ಸದಾಕಾಲವೂ ನಿಮ್ಮೊಂದಿಗೆ ಇರುವವನಾಗಿದ್ದೇನೆ. ಯಾವ ಸಮಯದಲ್ಲಿ ಬಂದರು ಸಿಗುವವನಾಗಿದ್ದೇನೆ ಎಂದರು.
ಕೆಲವು ಗಿರಾಕಿಗಳು ಎಲೆಕ್ಷನ್ ಸಲುವಾಗಿ ಬಂದು ಸುಳ್ಳು ಆಶ್ವಾಸನೆಗಳನ್ನು ನೀಡುತ್ತಾರೆ. ಅವರೆಲ್ಲ ಜೇಬಿನಲ್ಲಿ ಪಾಸ್ಪೋರ್ಟ್ ಇಟ್ಕೊಂಡು ಓಡಾಡುತ್ತಾರೆ. ಯಾವಾಗ ಎಲ್ಲಿಗೆ ಹಾರುತ್ತಾರೆ ಅಂತ ಗೋತ್ತಾಗಲ್ಲ. ಏನೋ ಆಸೆಯಿಂದ ಓಡಾಡ್ತಿದ್ದಾರೆ. ನಮ್ಮ ಕ್ಷೇತ್ರದ ಜನರು ಅವರಿಗೆ ತಕ್ಕಪಾಠ ಕಲಿಸಬೇಕು. ಸದಾ ನಿಮ್ಮ ಜೊತೆಗೆ ಇರುವ ನನಗೆ ಮತ ನೀಡಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು.
ಮತಯಾಚನೆಯ ನಡುವೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ವಿವಿಧ ಗ್ರಾಮಗಳ ಮಂದಿರ, ಮಸೀದಿ, ದರ್ಗಾ, ಚರ್ಚ್ ಗಳಿಗೆ ಭೇಟಿ ನೀಡಿ ಪೂಜೆ, ಪ್ರಾರ್ಥನೆ ಸಲ್ಲಿಸಿ, ಮಹಾತ್ಮರ ಪುತ್ಥಳಿ, ಪ್ರತಿಮೆ, ಪೋಟೋಗಳಿಗೆ ಮಾಲಾರ್ಪಣೆ ಮಾಡಿದರು.
ಚುನಾವಣಾ ಪ್ರಚಾರದ ವೇಳೆಯಲ್ಲಿಯೇ ಸಂಗೊಳಗಿ ಗ್ರಾಮದಲ್ಲಿ ಬೇಮಳಖೇಡ ಗ್ರಾಮದ ವಿವಿಧ ಪಕ್ಷಗಳ ಪ್ರಮುಖರನ್ನು ಹಾಗೂ ವಿವಿಧ ಗ್ರಾಮಗಳಲ್ಲಿ ಅನೇಕರನ್ನು ಜೆಡಿಎಸ್ ಪಕ್ಷದ ಶಾಲು ಹೊದಿಸಿ, ಧ್ವಜ ನೀಡುವ ಮೂಲಕ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡರು. ಪಕ್ಷದ ರಾಜ್ಯ, ಜಿಲ್ಲಾ, ತಾಲೂಕು, ಹೋಬಳಿ, ಗ್ರಾಮ ಘಟಕಗಳ ಮುಖಂಡರು, ಸಹಸ್ರಾರು ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಅನೇಕರಿದ್ದರು.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…