ಬೀದರ್: ಮಗಳನ್ನು ಡಾಕ್ಟರ್ ಮಾಡುವ ಕನಸು ಕಟ್ಟಿಕೊಂಡಿದ್ದ ಬಡಪಾಯಿ ತಂದೆಗೆ ಮೂವರು ವಂಚಿಸಿ ಹಣ ಲಪಾಟಿಯಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮಗಳಿಗೆ ವೈದ್ಯಕೀಯ ಸೀಟು ಕೊಡಿಸುವುದಾಗಿ ನಂಬಿಸಿದ ಮೂವರು ಬೀದರ್ ಮೂಲದ ವ್ಯಕ್ತಿಗೆ ವಂಚಿಸಿದ್ದಾರೆ. ಬೀದರ್ ನಿವಾಸಿ ಮೊಹಮ್ಮದ್ ಅಬ್ದುಲ್ ರಜಾಕ್ 16.23 ಲಕ್ಷ ರೂ ಹಣ ಕಳೆದುಕೊಂಡಿದ್ದು, ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.
ತಮ್ಮ ಮಗಳು ನೀಟ್ ಪರೀಕ್ಷೆಯಲ್ಲಿ 241 ಅಂಕ ಪಡೆದಿದ್ದಾಳೆ ತನ್ನ ಸಂಬಂಧಿಕರೊಬ್ಬರಿಗೆ ಹೇಳಿದ್ದು, ಈ ವೇಳೆ ಸನಾ ಇಸ್ಲಾಂ ಖಾನ್ ಎಂಬುವರ ಪರಿಚಯವಾಗಿದೆ. ಆಕೆ ವಿಜಯಪುರದ ಅಲ್ ಅಮೀನ್ ವೈದ್ಯಕೀಯ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ಕೋಟಾದಡಿ ಸೀಟು ವ್ಯವಸ್ಥೆ ಮಾಡಬಹುದೆಂದು ಹೇಳಿಕೊಂಡಿದ್ದಾಳೆ, ಆದರೆ ಅದಕ್ಕಾಗಿ 16.23 ಲಕ್ಷ ರೂ. ಹಣ ನೀಡಬೇಕೆಂದು ತಿಳಿಸಿದ್ದಳು.
ಹೀಗಾಗಿ ರಜಾಕ್ ಆಕೆಗೆ ಮುಂಗಡ ಹಣ ಪಾವತಿಸಿ, ವಸಂತನಗರದ ಅಲ್ ಅಮೀನ್ ಆಸ್ಪತ್ರೆಗೆ ಬಂದು ಆಕೆಯನ್ನು ಭೇಟಿಯಾಗಿದ್ದಾರೆ. ಜೊತೆಗೆ ತನ್ನ ಮಗಳ ವಿದ್ಯಾಭ್ಯಾಸದ ಪ್ರಮಾಣಪತ್ರಗಳನ್ನು ನೀಡಿದ್ದಾರೆ. ಆಸ್ಪತ್ರೆಯಲ್ಲಿ ಸನಾ ಮತ್ತು ಇನ್ನೊಬ್ಬ ಮಹಿಳೆ ಶಬಾನಾರನ್ನು ಭೇಟಿ ಮಾತುಕತೆ ನಡೆಸಿದ್ದರು.
ಅವರಿಬ್ಬರು ತಮ್ಮ ಮಗಳಿಗೆ ಸೀಟು ಸಿಗುತ್ತದೆ ಎಂದು ಭರವಸೆ ನೀಡಿದ್ದರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದಾದ ಕೆಲವು ದಿನಗಳ ನಂತರ ರಜಾಕ್, ಮೊಹಮ್ಮದ್ ಅರ್ಮಾನ್ ಎಂಬುವರ ಖಾತೆಗೆ ಹಣವನ್ನು ವರ್ಗಾಯಿಸಿದ್ದಾರೆ ಎಂದು ಪೊಲೀಸರು ಹೇಳಿದರು.
ಹಣಕಾಸು ವಹಿವಾಟು ಜನವರಿ ಮತ್ತು ಮಾರ್ಚ್ ನಡುವೆ ನಡೆದಿದೆ. ಆರೋಪಿಗಳು ರಜಾಕ್ ಫೋನ್ ಕರೆಗಳಿಗೆ ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದಾಗ ಅನುಮಾನಗೊಂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…