ಹುಮ್ನಾಬಾದ್: ಮೊನ್ನೆ ಮೊನ್ನೆಯಷ್ಟೆ ನೇಪಾಳದಲ್ಲಿ ಭೀಕರ ಭೂಕಂಪನ ಉಂಟಾಗಿ ನೂರಾರು ಮಂದಿ ಮೃತಪಟ್ಟಿದ್ದರು. ಅದೇ ವೇಳೆ ದೆಹಲಿಯಲ್ಲಿಯೂ ಭೂಮಿ ಕಂಪಿಸಿತ್ತು. ಇದೀಗ ಕರ್ನಾಟಕದಲ್ಲಿಯೂ ಭೂಕಂಪನ ಸಂಭವಿಸಿದೆ.
ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಗ್ರಾಮಗಳಾದ ವಡ್ಡನಕೇರಾ, ಮದರಗಾಂವ್ ಗ್ರಾಮಗಳಲ್ಲಿ ಮತ್ತೆ ಭೂಕಂಪನ ಉಂಟಾಗಿದೆ. ಬೀದರ್ನ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಘಟಕದ ಕೇಂದ್ರದಲ್ಲಿ 2.4ರಷ್ಟು ತೀವ್ರತೆ ದಾಖಲಾಗಿದೆ.
ಭೂಕಂಪನ ಪ್ರಮಾಣ ಕಡಿಮೆ ಹಿನ್ನೆಲೆ ಭಯಪಡದಂತೆ ಗ್ರಾಮಸ್ಥರಿಗೆ ಬೀದರ್ ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ಮನವಿ ಮಾಡಿದ್ದಾರೆ. ಗ್ರಾಮಗಳಲ್ಲಿ ಒಂದೇ ವಾರದಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ. ನ.6ರಂದು ವಡ್ಡನಕೇರಾ, ಮದರಗಾಂವ್ನಲ್ಲಿ ಭೂಮಿ ಕಂಪಿಸಿತ್ತು.