Categories: ಬೀದರ್

ಬೀದರ್ : ‘ನೀರಿನ ಸಮಸ್ಯೆ ಹೆಚ್ಚಿಸಿದ ಚುನಾವಣೆ’

ಔರಾದ್: ಬೇಸಿಗೆ ಬಿಸಿಲಿನ ತೀವ್ರತೆ ಜಾಸ್ತಿಯಾಗುತ್ತಿದ್ದಂತೆ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಹೆಚ್ಚುತ್ತಿದೆ. ಬರ ಹಾಗೂ ನೀರಿನ ಸಮಸ್ಯೆ ಪರಿಹರಿಸಲು ಹೆಚ್ಚಿನ ಸಮಯ ನೀಡಬೇಕಾದ ಅಧಿಕಾರಿಗಳು ಚುನಾವಣೆ ಕರ್ತವ್ಯದಲ್ಲಿ ನಿರತರಾಗಿರುವುದರಿಂದ ಸಮಸ್ಯೆ ಮತ್ತಷ್ಟು ಉಲ್ಬಣವಾಗುತ್ತಿದೆ.

ಗ್ರಾಮಾಂತರ ಪ್ರದೇಶದಲ್ಲಿ ನೀರಿನ ಸಮಸ್ಯೆ ಪರಿಹರಿಸುವ ಹೊಣೆ ಪಿಡಿಒಗಳದ್ದು. ಆದರೆ ಬಹುತೇಕ ಪಿಡಿಒಗಳಿಗೆ ಚುನಾವಣೆ ಕೆಲಸ ಅದರಲ್ಲೂ ಚೆಕ್‌ಪೋಸ್ಟ್‌ನಲ್ಲಿ ಜವಾಬ್ದಾರಿ ಕೊಟ್ಟಿದ್ದು ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅಡೆತಡೆಯಾಗಿದೆ.

‘ತಾಲ್ಲೂಕಿನ ವಡಗಾಂವ್ ಗ್ರಾಮದ ವಾರ್ಡ್ 1ರಲ್ಲಿ ಕೊಳವೆ ಬಾವಿ ಮೋಟಾರು ಕೆಟ್ಟು ನೀರಿನ ಸಮಸ್ಯೆಯಾಗಿದೆ. ಅಲ್ಲಿನ ಮಹಿಳೆಯರು ಬೇರೆ ಬೇರೆ ಕಡೆ ಸುತ್ತಿ ನೀರು ತರಬೇಕಿದೆ. ಆದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸುತ್ತಿಲ್ಲ’ ಎಂದು ವಡಗಾಂವ್ ನಿವಾಸಿ ಮಹೇಂದ್ರಸಿಂಗ್ ಠಾಕೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ವಡಗಾಂವ್‍ನಲ್ಲಿ ನೀರಿನ ಸಮಸ್ಯೆ ಆಗಿರುವುದು ನಿಜ. ಮೋಟಾರ್ ದುರಸ್ತಿಗೆ ಕೊಟ್ಟಿದ್ದೇವೆ. ಅದನ್ನು ತಂದು ಕೂಡಿಸಲು ನಮಗೆ ಸಮಯ ಸಿಗದಂತಾಗಿದೆ. ನನಗೂ, ಕಾರ್ಯದರ್ಶಿಗೂ ಚೆಕ್‍ಪೋಸ್ಟ್‌ನಲ್ಲಿ ಕೆಲಸ ಹಚ್ಚಿದ್ದಾರೆ. ಹೀಗಾಗಿ ಪಂಚಾಯಿತಿ ಕೆಲಸ ಮಾಡಲು ಆಗುತ್ತಿಲ್ಲ’ ಎಂದು ಪಿಡಿಒ ಸುಭಾಷ ತಿಳಿಸಿದ್ದಾರೆ.

ತಾಲ್ಲೂಕಿನ ಕೆಲ ಪಿಡಿಒಗಳಿಗೆ ಚೆಕ್‍ಪೋಸ್ಟ್ ಕೆಲಸ ಹಾಕಿದ್ದಾರೆ. ಇದರಿಂದ ಕುಡಿಯುವ ನೀರು, ಉದ್ಯೋಗ ಖಾತರಿಯಂತಹ ಕೆಲಸಕ್ಕೆ ಅಡೆತಡೆ ಆಗುತ್ತಿದೆ. ಈ ಕುರಿತು ಪಿಡಿಒ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಲಾಗಿದೆ’ ಎಂದು ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಸುದೇಶ್ ತಿಳಿಸಿದ್ದಾರೆ.

‘ಅಧಿಕಾರಿಗಳು ಚುನಾವಣೆ ಕರ್ತವ್ಯದಲ್ಲಿ, ರಾಜಕಾರಣಿಗಳು ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡರೆ ಈ ಬೇಸಿಗೆಯಲ್ಲಿ ನಮ್ಮ ತಾಲ್ಲೂಕಿನ ಜನರ ಗತಿ ಏನಾಗಬೇಕು? ಎಂದು ಸಾಮಾಜಿಕ ಹೋರಾಟಗಾರ ಗುರುನಾಥ ವಡ್ಡೆ, ಅನೀಲ ಜಿರೋಬೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Chaitra Kulal

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

5 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

5 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago