News Karnataka Kannada
Friday, May 03 2024
ಬೀದರ್

ನೌಕರರ ಮುಷ್ಕರ : ಔರಾದ್‌ನಲ್ಲಿ ಪರದಾಡಿದ ಜನ

Employees' strike: People stranded in Aurad
Photo Credit : News Kannada

ಔರಾದ್: ಪಟ್ಟಣದಲ್ಲಿ ರಾಜ್ಯ ಸರ್ಕಾರಿ ನೌಕರರು ಬುಧವಾರ ನಡೆಸಿದ ಮುಷ್ಕರದಿಂದಾಗಿ ಸಾರ್ವಜನಿಕರು ಪರದಾಡುವಂತಾಯಿತು. ಮುಷ್ಕರದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು ಕಚೇರಿಗಳಿಗೆ ಬಾರದಿದ್ದರಿಂದ ಜನ ತೊಂದರೆ ಎದುರಿಸಬೇಕಾಯಿತು. ತಾಲ್ಲೂಕು ಪಂಚಾಯಿತಿ, ತಹಶೀಲ್ದಾರ್ ಕಚೇರಿ ಸೇರಿದಂತೆ ಬಹುತೇಕ ಕಚೇರಿಗಳಲ್ಲಿ ಸಿಬ್ಬಂದಿ ಇಲ್ಲದೆ ಬಿಕೋ ಎನ್ನುತ್ತಿದ್ದವು.

ಗ್ರಾಮೀಣ ಪ್ರದೇಶದ ಜನರಿಗೆ ಮುಷ್ಕರದ ಬಗ್ಗೆ ಮಾಹಿತಿ ಇಲ್ಲದ ಕಾರಣ ಕಚೇರಿಗೆ ಬಂದು ವಾಪಸ್ ಹೋಗಬೇಕಾಯಿತು.

‘ನನಗೆ ದಾಖಲೆ ವಿಭಾಗದಲ್ಲಿ ಕೆಲಸ ಇದೆ. ನಿನ್ನೆ ಬಂದಾಗ ನಾಳೆ ಬನ್ನಿ ಎಂದು ಹೇಳಿದ್ದರು. ಇಂದು ಇಲ್ಲಿ ಯಾರೂ ಇಲ್ಲ ಎಂದು ತಹಶೀಲ್ದಾರ್ ಕಚೇರಿಗೆ ಬಂದಿದ್ದ ಬಾವಲಗಾಂವ್ ಗ್ರಾಮದ ಅರ್ಜುನ ದಂಪತಿ ಹೇಳಿದರು.

ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಹೊರತುಪಡಿಸಿ ಹೊರ ರೋಗಿಗಳ ತಪಾಸಣೆ ಇರಲಿಲ್ಲ. ಅನೇಕ ರೋಗಿಗಳು ವೈದ್ಯರಿಗಾಗಿ ಕಾದು ಕುಳಿತಿದ್ದರು. ಇಂದು ಮುಷ್ಕರ ಇದೆ ಎಂದು ಆಸ್ಪತ್ರೆ ಸಿಬ್ಬಂದಿ ಅವರಿಗೆ ಮನೆಗೆ ಕಳುಹಿಸಿದರು. ಬೆಳಿಗ್ಗೆ ಸ್ವಲ್ಪ ಸಮಸ್ಯೆಯಾಗಿದೆ. ಮಧ್ಯಾಹ್ನದ ನಂತರ ತಾಲ್ಲೂಕಿನ ಎಲ್ಲ ಆಸ್ಪತ್ರೆಯಲ್ಲಿ ಹೊರ ರೋಗಿಗಳ ತಪಾಸಣೆ ಶುರುವಾಗಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಗಾಯತ್ರಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು