News Karnataka Kannada
Monday, May 13 2024
ಬೀದರ್

1.5 ಲಕ್ಷ ಮೌಲ್ಯದ ನಶೆ ಗುಳಿಗೆ ವಶಕ್ಕೆ ಪಡೆದ ಅಬಕಾರಿ ಇಲಾಖೆ

ಅಬಕಾರಿ ಅಧಿಕಾರಿಗಳ ಖಚಿತ ಮಾಹಿತಿ ಮೇರೆಗೆ ನಗರದ ಮಾಂಗರವಾಡಿ ಗಲ್ಲಿಯ ಮನೆಯೊಂದರ ಮೇಲೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ದಾಳಿ ನಡೆಸಿ 1.5 ಲಕ್ಷ ಮೌಲ್ಯದ ನಶೆ ಗುಳಿಗೆಯನ್ನು ವಶಕ್ಕೆ ಪಡೆದಿದೆ.
Photo Credit : NewsKarnataka

ಬೀದರ್ : ಅಬಕಾರಿ ಅಧಿಕಾರಿಗಳ ಖಚಿತ ಮಾಹಿತಿ ಮೇರೆಗೆ ನಗರದ ಮಾಂಗರವಾಡಿ ಗಲ್ಲಿಯ ಮನೆಯೊಂದರ ಮೇಲೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ದಾಳಿ ನಡೆಸಿ 1.5 ಲಕ್ಷ ಮೌಲ್ಯದ ನಶೆ ಗುಳಿಗೆಯನ್ನು ವಶಕ್ಕೆ ಪಡೆದಿದೆ.

ಮಾಂಗರವಾಡಿಯ ಅಶೋಕ ಮತ್ತು ವಿಕಾಸ್ ಮನೆಯ ಮೇಲೆ ದಾಳಿ ಮಾಡಿ 3065 ನಶೆ ಬರೋ ಡ್ರೆಮಿಡಾಲ್ ಕ್ಯಾಪಸೂಲ್ ವಶಕ್ಕೆ ಪಡೆದಿದೆ.

ದಾಳಿ ಸಂದರ್ಭದಲ್ಲಿ ಆರೋಪಿ ಅಶೋಕ ಮತ್ತು ವಿಕಾಸ ಪರಾರಿಯಾಗಿದ್ದಾರೆ. ಮನೆ ಪರಿಶೀಲನೆ ನಡೆಸಿದ 3065 ನಶೆ ಮಾತ್ರೆಯನ್ನು ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ದಾಳಿಯಲ್ಲಿ ಅಬಕಾರಿ ಡಿಸಿ ಆಯುಕ್ತ ಸಂಗನಗೌಡ ಹೊಸಳ್ಳಿ, ಅಬಕಾರಿ ಉಪ ಆಯುಕ್ತರಾದ ರವಿ ಮುರಗೋಡ್,ಹಣಮಂತ ಗುತ್ತೆದಾರ ಹಾಗೂ ಅಬಕಾರಿ ಸಿಬ್ಬಂದಿಗಳು ಭಾಗಿಯಾಗಿದ್ದರು. ಅಬಕಾರಿ ಪೋಲಿಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು