ಖಟಕಚಿಂಚೋಳಿ: ಭಾಲ್ಕಿ ತಾಲ್ಲೂಕಿನ ಡಾವರಗಾಂವ್ ಗ್ರಾಮದಲ್ಲಿ ಸಾಲಬಾಧೆ ತಾಳದೆ ರೈತ ಪಂಢರಿನಾಥ ರಾಮರಾವ್ ತುಕದೆ (56) ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ಎಂಟು ಎಕರೆ ಜಮೀನು ಹೊಂದಿದ್ದಾರೆ. ಎಸ್ಬಿಐ ಬ್ಯಾಂಕ್ನಲ್ಲಿ ₹1 ಲಕ್ಷ ಸಾಲ ಸೇರಿದಂತೆ ಖಾಸಗಿ ಮೂಲಗಳಿಂದ ಸಾಲ ಪಡೆದಿದ್ದರು.
ಹಿಂಗಾರು- ಬೆಳೆಗಳು ಕೂಡ ಕೈಕೊಟ್ಟಿರುವುದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಖಟಕಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.