News Karnataka Kannada
Sunday, April 28 2024
ಬೀದರ್

ಬೀದರ್: ಪವರ್ ಗ್ರಿಡ್ ಸ್ಥಾಪನೆಗೆ ಭೂಮಿ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ಗಡಿ ಬೀದರ್ ಜಿಲ್ಲೆ ಔರಾದ ತಾಲೂಕಿನ ಡೊಂಗರಗಾಂವ ಗ್ರಾಮದ ರೈತರ ಜಮೀನುಗಳಲ್ಲಿ ಪವರ್ ಗ್ರಿಡ್ ಸ್ಥಾವರ ಸ್ಥಾಪನೆಗೆ ಜಮೀನು ಕೊಡಲು ರೈತರು ನಿರಾಕರಿಸಿದ್ದು, ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಆಕ್ರೋಶ ಹೊರ ಹಾಕಿದರು.
Photo Credit : News Kannada

ಬೀದರ್: ಗಡಿ ಬೀದರ್ ಜಿಲ್ಲೆ ಔರಾದ ತಾಲೂಕಿನ ಡೊಂಗರಗಾಂವ ಗ್ರಾಮದ ರೈತರ ಜಮೀನುಗಳಲ್ಲಿ ಪವರ್ ಗ್ರಿಡ್ ಸ್ಥಾವರ ಸ್ಥಾಪನೆಗೆ ಜಮೀನು ಕೊಡಲು ರೈತರು ನಿರಾಕರಿಸಿದ್ದು, ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಆಕ್ರೋಶ ಹೊರ ಹಾಕಿದರು.

ನಮ್ಮ ಅನ್ನದ ತಟ್ಟೆ ರಕ್ಷಣೆ ಮಾಡಿ. ಇರುವ ನಮ್ಮ ಅಲ್ಪಸ್ವಲ್ಪ ಜಮೀನಿನಲ್ಲಿ ನಮ್ಮ ಉಪಜೀವನ, ಇದನ್ನು ಬಿಟ್ಟು ನಮಗೆ ಬೇರೆ ದಾರಿ ಇಲ್ಲ. ನಮ್ಮ ಜಮೀನಿಗೆ ಎಷ್ಟೇ ಹಣ ಕೊಟ್ಟರೂ ನಮ್ಮ ಅನ್ನದ ತಟ್ಟೆ ಎಂದಿಗೂ ಕೊಡಲು ಸಾಧ್ಯವಿಲ್ಲ ಎಂದು ರೈತರು ಆಕ್ರೋಶ ಹಾಕಿದರು. ನಮ್ಮ ಜಮೀನುಗಳಲ್ಲಿ ಪವರ್ ಗ್ರಿಡ್ ಸ್ಥಾಪನೆ ಬದಲು ಬೇರೆ ಕಡೆ ಎಲ್ಲಾದರೂ ಸರ್ಕಾರಿ ಅಥವಾ ಅರಣ್ಯ ಇಲಾಖೆ ಜಮೀನಿನಲ್ಲಿ ಪವರ್ ಗ್ರಿಡ್ ಸ್ಥಾಪನೆ ಮಾಡಿ ಎಂದು ರೈತರು ಮನವಿ ಮಾಡಿದರು.

ರೈತರ ವಿರೋಧವಿದ್ದರೆ ಈ ಪ್ರದೇಶದಲ್ಲಿ ತಾವುಗಳು ಬರುವ ಅವಶ್ಯಕತೆ ಇರುವುದಿಲ್ಲ ಬಂದರೆ ಕಾನೂನು ವಿರುದ್ಧವಾಗುತ್ತದೆ. ನಮ್ಮ ವಿರೋಧದ ನಡೆಯು ತಾವು ಜಮೀನು ತೆಗೆದುಕೊಳ್ಳುವ ವಿಚಾರ ಮಾಡಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದರು.

ರೈತರು ತಮ್ಮ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪಾ ಅಣದೂರೆ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ್ ಚಂದ್ರಶೇಖರ್ ಜಮಖಂಡಿ ಅನೇಕ ಮುಖಂಡರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು