News Karnataka Kannada
Wednesday, May 01 2024
ಬೀದರ್

ದ್ವಿತೀಯ ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಲಾವಣ್ಯಗೆ ಸನ್ಮಾನ

Lavanya felicitated for securing first place in taluk in 2nd PUC
Photo Credit : News Kannada

ಔರಾದ : ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಲಾವಣ್ಯಗೆ ಔರಾದ ಪಟ್ಟಣದ ನ್ಯೂ ಪತ್ರಿ ಸ್ವಾಮಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸುಭಾಸ್ ಚಂದ್ರ ಭೋಸ್ ಯುವಕ ಸಂಘದಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಈ ವೇಳೆ ಡಾ ಪ್ರಮೋದೀನಿ ಮಾತನಾಡಿ, ಲಾವಣ್ಯಲ ಈ ಸಾಧನೆ ತಾಲೂಕಿನ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಹಾಗೂ ಮುಂದಿನ ಶೈಕ್ಷಣಿಕ ಜೀವನ ಉಜ್ವಲವಾಗಲಿ ಎಂದು ಹಾರೈಸಿದರು.

ಮುಖಂಡ ಶರಣಪ್ಪಾ ಪಾಟೀಲ್ ಮಾತನಾಡಿ, ಹಿಂದುಳಿದ ಹಣೆ ಪಟ್ಟಿ ಇರುವ ನಮ್ಮ ತಾಲೂಕಿನಲ್ಲಿ ಈ ಕಾಲೇಜನ ಉತ್ತಮ ಫಲಿತಾಂಶದಿಂದ ತಾಲೂಕಿನ ಕೀರ್ತಿ ಹೆಚ್ಚಿಸಿದೆ ಎಂದರು.

ಸಂಘದ ಅಧ್ಯಕ್ಷ ರತ್ನದೀಪ್ ಕಸ್ತೂರೆ ಮಾತನಾಡಿ, ವಿದ್ಯಾರ್ಥಿನಿಯ ಮುಂದಿನ ಶಿಕ್ಷಣಕ್ಕೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ನರ್ಸಿಂಗ್ ಆಫೀಸರ್ ಲತಿಫಾ, ವಿವೇಕ ನಿರ್ಮಳೆ, ಬಬ್ದು ಪಾಟೀಲ್, ಲಕ್ಷ್ಮಿಕಾಂತ ಕಳಸೆ, ಕಾಲೇಜು ಪ್ರಾಂಶುಪಾಲರಾದ ಅಕಿಲ್,ಉಪನ್ಯಾಸಕರಾದ ಅನಿಲ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು