ಕಮಲನಗರ: ಲೋಕಸಭಾ ಚುನಾವಣೆಗೆ ಮಾದರಿ ನೀತಿ ಸಂಹಿತೆ ಜಾರಿಗೆ ಹಿನ್ನೆಲೆ ಪಟ್ಟಣದ ಪ್ರಮುಖ ವೃತ್ತಗಳಲ್ಲಿರುವ ಫ್ಲೆಕ್ಸ್, ಬ್ಯಾನರ್ಗಳನ್ನು ಬುಧವಾರ ಗ್ರಾಮ ಪಂಚಾಯಿತಿ ಸಿಬ್ಬಂದಿ ತೆರವುಗೊಳಿಸಲಾಯಿತು.
ಅಲ್ಲದೆ ಸರ್ಕಾರದ ಯೋಜನೆಗಳ ಪ್ರಚಾರದ ಬ್ಯಾನರ್ಗಳು ತೆರವುಗೊಳಿಸಿದರು. ಮನೆಗಳ ಮೇಲೆ ಬರೆದಂಥ ಗೊಡೆ ಬರಹಗಳನ್ನು ಅಳಿಸಿ ಹಾಕಲಾಯಿತು.
ಕಮಲನಗರದ ಪ್ರವಾಸಿ ಮಂದಿರ ಹಾಗೂ ದೇವಸ್ಥಾನಗಳಲ್ಲಿ ರಾಜಕೀಯ ಚಟುವಟಿಕೆಗಳಿಗೆ ಬಳಸುವಂತಿಲ್ಲ ಎಂದು ತಹಶೀಲ್ದಾರ್ ಅಮೀತ್ ಕುಮಾರ ಕುಲಕರ್ಣಿ ತಿಳಿಸಿದ್ದಾರೆ.