News Karnataka Kannada
Monday, April 29 2024
ಬೀದರ್

ಬೀದರ್‌ನಲ್ಲಿ ಎಫ್‌ಎಂ ಕೇಂದ್ರಕ್ಕೆ ಮಂಜೂರಾತಿ: ಸಚಿವ ಖೂಬಾ

'ಬೀದರ್‌ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಬಿಡಿಸಿಸಿ) ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ' ಎಂದು ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಸ್ಪಷ್ಟಪಡಿಸಿದರು.
Photo Credit : News Kannada

ಬೀದರ್ : ‘ಜಿಲ್ಲೆಯಲ್ಲಿ ಎಫ್‌ಎಂ ಕೇಂದ್ರ ಆರಂಭಿಸಲು ಮಂಜೂರಾತಿ ದೊರೆತಿದ್ದು, ಇನ್ನೆರಡು ವಾರದೊಳಗೆ ಚಾಲನೆ ಸಿಗಲಿದೆ’ ಎಂದು ಕೇಂದ್ರ ರಾಸಾಯನಿಕ, ರಸಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

ನನ್ನ ಸತತ ಪ್ರಯತ್ನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಕ್ರಾಂತಿ ಹಬ್ಬದ ಉಡುಗೊರೆ ರೂಪದಲ್ಲಿ ಎಫ್‌ಎಂ ಕೇಂದ್ರ ಮಂಜೂರು ಮಾಡಿದ್ದಾರೆ.

ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದಿಸಿರುವ ಮೋದಿ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ ಠಾಕೂರ್‌ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೀದರ್‌ ದೂರದರ್ಶನ ಕೇಂದ್ರದಲ್ಲಿ 100 ವ್ಯಾಟ್‌ ಸಾಮರ್ಥ್ಯದ ಎಫ್‌.ಎಂ. ಕೇಂದ್ರಕ್ಕೆ ಪ್ರಧಾನಿ ಮೋದಿ ವರ್ಚುವಲ್‌ ಮೂಲಕ ಉದ್ಘಾಟಿಸುವರು. ಕೇಂದ್ರವು ಆರಂಭದಲ್ಲಿ ಮರುಪ್ರಸಾರ ಕೇಂದ್ರವಾಗಿ ಕೆಲಸ ನಿರ್ವಹಿಸಲಿದೆ. ಸದ್ಯ ಬೆಂಗಳೂರು ಕೇಂದ್ರದಿಂದ ಪ್ರಸಾರವಾಗುವ ಎಲ್ಲ ಕಾರ್ಯಕ್ರಮಗಳು ಬೀದರ್‌ನಿಂದ ಮರು ಪ್ರಸಾರವಾಗಲಿವೆ.

ಕೆಲ ದಿನಗಳ ನಂತರ ಸ್ವತಂತ್ರವಾಗಿ ಕಾರ್ಯಾರಂಭ ಮಾಡಲಿದೆ. ಅದಕ್ಕೆ ಬೇಕಾದ ಸಿದ್ಧತೆ ಈಗಾಗಲೇ ಮಾಡಿಕೊಳ್ಳಲಾಗುತ್ತಿದೆ. ರಿಲಯನ್ಸ್‌ ಮತ್ತು ಇನ್ನೊಂದು ಖಾಸಗಿ ಸಂಸ್ಥೆಯವರು ಚಾನೆಲ್‌ ಪ್ರಾರಂಭಿಸಲು ಆಸಕ್ತಿ ತೋರಿದ್ದಾರೆ. ಸರ್ಕಾರದ ಎಫ್‌.ಎಂ. ಕೇಂದ್ರ ಪ್ರಾರಂಭವಾದ ನಂತರ ಖಾಸಗಿಯವರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದಿಸಿರುವ ಮೋದಿ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ ಠಾಕೂರ್‌ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೀದರ್‌ ದೂರದರ್ಶನ ಕೇಂದ್ರದಲ್ಲಿ 100 ವ್ಯಾಟ್‌ ಸಾಮರ್ಥ್ಯದ ಎಫ್‌ಎಂ ಕೇಂದ್ರಕ್ಕೆ ಪ್ರಧಾನಿ ಮೋದಿ ವರ್ಚುವಲ್‌ ಮೂಲಕ ಉದ್ಘಾಟಿಸುವರು. ಕೇಂದ್ರವು ಆರಂಭದಲ್ಲಿ ಮರುಪ್ರಸಾರ ಕೇಂದ್ರವಾಗಿ ಕೆಲಸ ನಿರ್ವಹಿಸಲಿದೆ. ಸದ್ಯ ಬೆಂಗಳೂರು ಕೇಂದ್ರದಿಂದ ಪ್ರಸಾರವಾಗುವ ಎಲ್ಲ ಕಾರ್ಯಕ್ರಮಗಳು ಬೀದರ್‌ನಿಂದ ಮರು ಪ್ರಸಾರವಾಗಲಿವೆ. ಕೆಲ ದಿನಗಳ ನಂತರ ಸ್ವತಂತ್ರವಾಗಿ ಕಾರ್ಯಾರಂಭ ಮಾಡಲಿದೆ. ಅದಕ್ಕೆ ಬೇಕಾದ ಸಿದ್ಧತೆ ಈಗಾಗಲೇ ಮಾಡಿಕೊಳ್ಳಲಾಗುತ್ತಿದೆ. ರಿಲಯನ್ಸ್‌ ಮತ್ತು ಇನ್ನೊಂದು ಖಾಸಗಿ ಸಂಸ್ಥೆಯವರು ಚಾನೆಲ್‌ ಪ್ರಾರಂಭಿಸಲು ಆಸಕ್ತಿ ತೋರಿದ್ದಾರೆ. ಸರ್ಕಾರದ ಎಫ್‌ಎಂ ಕೇಂದ್ರ ಪ್ರಾರಂಭವಾದ ನಂತರ ಖಾಸಗಿಯವರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಎಫ್‌ಎಂ ಕೇಂದ್ರ ಆರಂಭ ಆಗುವುದರಿಂದ ಸ್ಥಳೀಯ ಕಲಾವಿದರು, ಉದ್ಯಮಕ್ಕೆ ಅನುಕೂಲವಾಗಿದೆ. ಕಲೆ, ಸಂಸ್ಕೃತಿ, ಭಾಷೆಗೂ ಪ್ರಾಶಸ್ತ್ಯ ಸಿಗಲಿದೆ. ಕಳೆದ ಹತ್ತು ವರ್ಷಗಳಲ್ಲಿ ಸಂಸದನಾಗಿ ಜಿಲ್ಲೆಗೆ ಅನೇಕ ಯೋಜನೆಗಳನ್ನು ತಂದಿದ್ದು, ಅದಕ್ಕೆ ಹೊಸ ಸೇರ್ಪಡೆ ಎಫ್‌ಎಂ ಕೇಂದ್ರ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು