News Karnataka Kannada
Saturday, May 04 2024
ಬೀದರ್

ಕರ್ತವ್ಯಲೋಪ ಆರೋಪ: ಅರಣ್ಯಾಧಿಕಾರಿ ವರ್ಗಾವಣೆ

Forest officer transferred on charges of dereliction of duty
Photo Credit : Pixabay

ಬೀದರ್: ಚಿಟಗುಪ್ಪ ತಾಲ್ಲೂಕಿನಲ್ಲಿ ಅರಣ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂಗೀತ ಸಂಗಮೇಶ್ ಅವರನ್ನುಕರ್ತವ್ಯ ಲೋಪ ಆರೋಪದಡಿ ವರ್ಗಾವಣೆ ಮಾಡಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಖಾತೆ ಮಂತ್ರಿ ಈಶ್ವರ್‌ ಖಂಡ್ರೆ ಹೇಳಿದರು.

ಹುಮನಾಬಾದ್‌ನಲ್ಲಿ ಮಾತನಾಡಿದ ಅವರು ಸಂಗೀತ ಸಂಗಮೇಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಹಾಗೂ ಕರ್ತವ್ಯಲೋಪಕ್ಕೆ ಅವಕಾಶವಿಲ್ಲ. ಇದು ಅರಣ್ಯ ಇಲಾಖೆಯ ಎಲ್ಲ ಅಧಿಕಾರಿಗಳಿಗೂ ಹಾಗೂ ಸಿಬ್ಬಂದಿಗಳಿಗೂ ಅನ್ವಯಿಸುತ್ತದೆ ಎಂದು ತಿಳಿಸಿದ್ದಾರೆ.

ಅರಣ್ಯ ಅಧಿಕಾರಿ ಸಂಗೀತ ಸಂಗಮೇಶ ವಿರುದ್ಧ ಅರಣ್ಯ ಭೂಮಿ ನಾಶ ಹಾಗೂ ಕರ್ತವ್ಯ ಲೋಪ ಕುರಿತಂತೆ ತಾಲೂಕಿನ ಚಾಂಗಲೇರಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಶೋಕ್‌ ಅಲಿಪುರ್ ದೂರು ಸಲ್ಲಿಸಿದ್ದರು.

ಅಧಿಕಾರಿ ಲೋಪ ಆರೋಪಕ್ಕೆ ಸಂಬಂಧಿಸಿದಂತೆ ಪತ್ರಿಕೆ ಸರಣಿ ವಿರುದ್ಧ ಕರ್ತವ್ಯ ವರದಿಗಳನ್ನು ಪ್ರಕಟಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು