ಬೀದರ್: ಮುಂಬರುವ 2023 ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ರಾಜಕೀಯ ಪಕ್ಷಗಳ ‘ಗಿಫ್ಟ್ ಪಾಲಿಟಿಕ್ಸ್’ ಜೋರಾಗಿ ನಡೀತಿದೆ. ಜಿಲ್ಲೆಯ ಹುಮ್ನಾಬಾದ್ ಕಾಂಗ್ರೆಸ್ ಶಾಸಕ ರಾಜಶೇಖರ್ ಪಾಟೀಲ್ ಅವರು ಮತದಾರರಿಗೆ ಗಿಫ್ಟ್ ಆಗಿ ಕುಕ್ಕರ್ ನೀಡುತ್ತಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದೆ.
ಮತದಾರರಿಗೆ ‘ಮಾತೃ ನಮನ’ ಕಾರ್ಯಕ್ರಮದಲ್ಲಿ ಗಿಫ್ಟ್ ಕೊಡುತ್ತಿದ್ದರಿಂದ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಪುರುಷರು ಸೇರಿಕೊಂಡಿದ್ದರು.
ಇದೇ ವೇಳೆ ಗಿಫ್ಟ್ಗಾಗಿ ನೂಕುನುಗ್ಗಲು ಉಂಟಾಗಿ ಇಬ್ಬರು ಕಾಲ್ತುಳಿತಕ್ಕೆ ಒಳಗಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಮನಾಬಾದ್ನ ರಾಜೇಶ್ವರಿ ಮೈದಾನದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದ ವೇಳೆ ಅವಘಡ ಸಂಭವಿಸಿದೆ.
ಈ ಕುರಿತು ಗಂಭೀರವಾಗಿ ಗಾಯಗೊಂಡ ಕುಟುಂಬಸ್ಥರ ಜೊತೆ ಮಾತನಾಡಿದ್ದಾರೆ. ಆ ಇಬ್ಬರಿಗೆ ಏನಾದರೂ ಆದರೆ ಅದಕ್ಕೆ ನಾನೇ ಜವಾಬ್ದಾರಿಯಾಗ್ತೇನೆ ಎಂದು ಹೇಳುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.