News Karnataka Kannada
Monday, May 13 2024
ಬೀದರ್

ಬೀದರ್‌ನಲ್ಲಿ ಮಹಿಳೆಯರಿಗೆ ಉಚಿತ ಕುಕ್ಕರ್ ಹಂಚಿಕೆ; ಕಾಲ್ತುಳಿತ ಸಂಭವಿಸಿ ಇಬ್ಬರು ಗಂಭೀರ

Free cooker distribution to women in Bidar; Stampede occurs, two seriously injured
Photo Credit : News Kannada

ಬೀದರ್: ಮುಂಬರುವ 2023 ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ರಾಜಕೀಯ ಪಕ್ಷಗಳ ‘ಗಿಫ್ಟ್ ಪಾಲಿಟಿಕ್ಸ್’ ಜೋರಾಗಿ ನಡೀತಿದೆ. ಜಿಲ್ಲೆಯ ಹುಮ್ನಾಬಾದ್ ಕಾಂಗ್ರೆಸ್​​​ ಶಾಸಕ ರಾಜಶೇಖರ್ ಪಾಟೀಲ್​​ ಅವರು ಮತದಾರರಿಗೆ ಗಿಫ್ಟ್ ಆಗಿ ಕುಕ್ಕರ್ ನೀಡುತ್ತಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದೆ.

ಮತದಾರರಿಗೆ ‘ಮಾತೃ ನಮನ’ ಕಾರ್ಯಕ್ರಮದಲ್ಲಿ ಗಿಫ್ಟ್ ಕೊಡುತ್ತಿದ್ದರಿಂದ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಪುರುಷರು ಸೇರಿಕೊಂಡಿದ್ದರು.

ಇದೇ ವೇಳೆ ಗಿಫ್ಟ್​ಗಾಗಿ ನೂಕುನುಗ್ಗಲು ಉಂಟಾಗಿ ಇಬ್ಬರು ಕಾಲ್ತುಳಿತಕ್ಕೆ ಒಳಗಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಮನಾಬಾದ್‌ನ ರಾಜೇಶ್ವರಿ ಮೈದಾನದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದ ವೇಳೆ ಅವಘಡ ಸಂಭವಿಸಿದೆ.

ಈ ಕುರಿತು ಗಂಭೀರವಾಗಿ ಗಾಯಗೊಂಡ ಕುಟುಂಬಸ್ಥರ ಜೊತೆ ಮಾತನಾಡಿದ್ದಾರೆ. ಆ ಇಬ್ಬರಿಗೆ ಏನಾದರೂ ಆದರೆ ಅದಕ್ಕೆ ನಾನೇ ಜವಾಬ್ದಾರಿಯಾಗ್ತೇನೆ ಎಂದು ಹೇಳುತ್ತಿರೋ ವಿಡಿಯೋ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು