ಹುಮನಾಬಾದ್: ಬಿಎಸ್ಪಿ ಬಿ-ಫಾರಂ ಸಿಗದ ಕಾರಣ ಮುಖಂಡ ಅಂಕುಶ್ ಗೋಖಲೆ ಅವರು ಬಹುಜನ ಸಮಾಜ ಪಕ್ಷಕ್ಕೆ ರಾಜೀನಾಮೆ ನೀಡಿ ಸಿ.ಎಂ ಇಬ್ರಾಹಿಂ ನೇತೃತ್ವದಲ್ಲಿ ಸೋಮವಾರ ಜೆಡಿಎಸ್ ಸೇರ್ಪಡೆಯಾದರು.
ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿಎಂ ಇಬ್ರಾಹಿಂ ಅವರು ಮಾತನಾಡಿ,’ಅಂಕುಶ್ ಗೋಖಲೆ ಅವರು ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ಹೋರಾಟ ನಡೆಸಿದ್ದಾರೆ.
ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಬೆಳವಣಿಗೆಗೆ ಸಹಕಾರ ನೀಡಲಿದ್ದಾರೆ’ ಎಂದರು.
ಅಂಕುಶ್ ಗೋಖಲೆ ಮಾತನಾಡಿ,’ಬಿಎಸ್ಪಿಗೆ ರಾಜೀನಾಮೆ ನೀಡಿದ ನಂತರ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಸಂಪರ್ಕ ಮಾಡಿದರು. ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿ ಗಳು ಒಂದೇ ಮನೆಯ ಸದಸ್ಯರು. ಹೀಗಾಗಿ ಪಾಟೀಲ ಪರಿವಾರವನ್ನು ದೂರ ಇರಿಸಬೇಕೆಂದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದೇನೆ’ ಎಂದು ಅವರು ಹೇಳಿದರು.
ಶಾಸಕ ಬಂಡೆಪ್ಪ ಕಾಶೆಂಪೂರ, ಜೆಡಿಎಸ್ ಅಭ್ಯರ್ಥಿ ಸಿ.ಎಂ.ಫೈಜ್, ಸುರೇಶ್ ಸಿಗಿ ಇತರರು ಇದ್ದರು.