ಹುಮನಾಬಾದ್: ‘ಅಂಬಿಗರ ಚೌಡಯ್ಯನವರ ಸಮಾನತೆಯ ಸಂದೇಶ ಸಾರ್ವಕಾಲಿಕ’ ಎಂದು ಬಿಜೆಪಿ ಮುಖಂಡ ಡಾ.ಸಿದ್ದು ಪಾಟೀಲ ಹೇಳಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. 12ನೇ ಶತಮಾನದ ಅಂಬಿಗರ ಚೌಡಯ್ಯನವರು ವಚನ ಚಳವಳಿಯಲ್ಲಿ ಪ್ರಸಿದ್ಧಿ ಪಡೆದಿದ್ದರು. ಕಲ್ಯಾಣ ಕ್ರಾಂತಿಯಲ್ಲಿ ವಚನಕಾರರನ್ನು ರಕ್ಷಣೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಪ್ರಭಾಕರ್ ನಾಗರಾಳೆ, ಮಂಡಲ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಭಂಡಾರಿ, ನಗರ ಘಟಕದ ಅಧ್ಯಕ್ಷ ಗಿರೀಶ ಪಾಟೀಲ, ಪುರಸಭೆ ಸದಸ್ಯ ಶಿವಲಿಂಗ ಸ್ವಾಮಿ, ಸಂತೋಷ ಸಂಗಮ್, ಪ್ರಭು ತಾಳಮಡಗಿ, ಕೋಲಿ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ನಾಗಭೂಷಣ ಸಂಗಮ್, ಗೋಪಾಲ ರೆಡ್ಡಿ ಜಲಸಂಗಿ ಹಾಗೂ ಲಖನ್ ಕೋಳಿವಾಡ ಇದ್ದರು.